ಬಂಟ್ವಾಳ

ಮಕ್ಕಳಿಗೆ ಒಳ್ಳೆಯ ಪರಿಸರ ನೀಡುವುದು ಶಿಕ್ಷಣದ ಗುರಿ

ಬಂಟ್ವಾಳ: ಮಕ್ಕಳಿಗೆ ಒಳ್ಳೆಯ ಪರಿಸರ ಕಲ್ಪಿಸಿಕೊಡುವುದೇ‌ ಪ್ರಾಥಮಿಕ ಶಿಕ್ಷಣದ ಗುರಿ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಶೈಕ್ಷಣಿಕ ವಾತಾವರಣ ನಿರ್ಮಿಸಿಕೊಡಬೇಕಾಗಿ ಬಂಟ್ವಾಳ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಫಾರೂಕ್ ಬಂಟ್ವಾಳ ಅವರು ಹೇಳಿದರು.

ಜಾಹೀರಾತು

ಕಾವಳಮೂಡೂರು, ಕೆದ್ದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಮುದಾಯದತ್ತ ಶಾಲೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಮಕ್ಕಳನ್ನು ಶೈಕ್ಷಣಿಕ ವಿಕಸನಕ್ಕೆ ಪೂರಕವಾಗಿ ಬೆಳೆಸಬೇಕಾಗಿದೆ. ಸಮುದಾಯ ಶೈಕ್ಷಣಿಕ ಜಾಗೃತಿಗೊಂಡಾಗ ಮಾತ್ರ ಮೌಲ್ಯಾಧಾರಿತ ಶಿಕ್ಷಣ ಗುರಿ ಮುಟ್ಟಲು ಸಾಧ್ಯ ಎಂದವರು ತಿಳಿಸಿದರು.

ಕೆದ್ದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳು, ಎಸ್.ಡಿ.ಎಸ್.ಡಿ.ಯ ಕಾರ್ಯವೈಖರಿ, ಶಿಕ್ಷಕರ ಹಾಗೂ ಪೋಷಕರ ಸಹಭಾಗಿತ್ವ ಮಾದರಿಯಾಗಿದ್ದು, ಕೇಂದ್ರದ ವತಿಯಿಂದ ಗುರುತಿಸಲಾಗುವುದಾಗಿ ಫಾರೂಕ್ ಬಂಟ್ವಾಳ ಪ್ರತಿಕ್ರಿಯಿಸಿದರು.‌

ಜಾಹೀರಾತು

ಶೈಕ್ಷಣಿಕ ಹಾಗೂ ಸಾಮಾಜಿಕ ವಿಷಯಾಧಾರಿತ ಕಿರು ನಾಟಕವನ್ನು ವಿದ್ಯಾರ್ಥಿ ಕಲಾವಿದರ ತಂಡ ಪ್ರದರ್ಶಿಸಿತು.‌ ಪಡಿ ಸಂಸ್ಥೆಯ ಸಂಯೋಜಕಿ ರಾಜೇಶ್ವರಿ ಅವರು ನಾಟಕ ಪ್ರದರ್ಶನವನ್ನು ಸಂಯೋಜಿಸಿದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ದಿನೇಶ್ ಶೆಟ್ಟಿ ಕಾವಳಕಟ್ಟೆ ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು.

‌ಸಮಿತಿ ಉಪಾಧ್ಯಕ್ಷೆ ಚಂದ್ರಾವತಿ, ಸದಸ್ಯರಾದ ರಾಜುಗೋಪಾಲ್, ಯೋಗೀಶ್ ಆಚಾರ್ಯ, ಲಕ್ಷ್ಮಣ ಆಚಾರ್ಯ, ಗ್ರಾ.ಪಂ. ಸದಸ್ಯರಾದ ಮೋಹನ‌ ಆಚಾರ್ಯ, ಸತೀಶ್‌ ಪಡಂತರಬೆಟ್ಟು ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಉಮಾ ಸ್ವಾಗತಿಸಿ, ಸಹ ಶಿಕ್ಷಕಿ ರಮ್ಯಾ ಪ್ರಭು ವಂದಿಸಿದರು. ಶಿಕ್ಷಕ ವಿ. ಚಂದಪ್ಪ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ