ಮಳೆಯ ಅಬ್ಬರಕ್ಕೆ ಹಲವೆಡೆ ಹಾನಿ, ನಾಳೆಯೂ ಶಾಲೆ, ಕಾಲೇಜುಗಳಿಗೆ ರಜೆ, ಕಡಲಿಗಿಳಿಯದಂತೆ ಪ್ರವಾಸಿಗರಿಗೆ ಎಚ್ಚರಿಕೆ

ಸಸಿಹಿತ್ಲು ಬೀಚ್ ನಲ್ಲಿ ಮರಗಳು ಉರುಳಿರುವುದು.

www.bantwalnews.com Editor: Harish Mambady

ಜಾಹೀರಾತು

ಚಂಡಮಾರುತದ ಛಾಯೆ, ವಾಯುಭಾರ ಕುಸಿತದ ಪರಿಣಾಮ, ಶುಕ್ರವಾರ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಹಲವು ಪ್ರದೇಶಗಳಲ್ಲಿ ಹಾನಿ ಸಂಭವಿಸಿದೆ. ನಾಳೆ (ಅ.26ರಂದು) ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ. ಸಮುದ್ರದಲ್ಲಿ ಚಂಡಮಾರುತ ಸನ್ನಿವೇಶವು ಉದ್ಭವಿಸಿದ್ದು,  ಮುನ್ನೆಚ್ಚರಿಕೆಯ ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು 26ರಂದು ಎಲ್ಲ ಅಂಗನವಾಡಿ ಕೇಂದ್ರ, ಸರಕಾರಿ ಅನುದಾನಿತ, ಖಾಸಗಿ ವಿದ್ಯಾಸಂಸ್ಥೆ (ಪಪೂ ಕಾಲೇಜುವರೆಗೆ) ರಜೆ ಘೋಷಿಸಿದೆ.

ಸಾರ್ವಜನಿಕರಿಗೆ ಮುನ್ನೆಚ್ಚರಿಕೆ:

  • ನೀರು ಇರುವ ತಗ್ಗು ಪ್ರದೇಶ, ಕೆರೆ, ನದೀತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಎಚ್ಚರಿಕೆ ವಹಿಸುವುದು.
  • ಮೀನುಗಾರರಿಗೆ ಮುಂದಿನ ಮೂರು ದಿನಗಳವರೆಗೆ ಕಡ್ಡಾಯವಾಗಿ ಸಮುದ್ರಕ್ಕಿಳಿಯದಂತೆ ಸೂಚನೆ
  • ಪ್ರವಾಸಿಗರು, ಸಾರ್ವಜನಿಕರು ನದೀ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸುವುದು.
  • ತುರ್ತು ಸೇವೆಗೆ ಟೋಲ್ ಫ್ರೀ ನಂಬ್ರ 1077 ಗೆ ಕರೆ ಮಾಡಬಹುದು.

ಜಿಲ್ಲೆಯ ಹಲವೆಡೆ ಹಾನಿ:

ದ.ಕ, ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಲವೆಡೆ ಹಾನಿ ಸಂಭವಿಸಿದೆ. ಬಂಟ್ವಾಳ ತಾಲೂಕಿನ ಒಟ್ಟು 12ಮನೆಗಳಿಗೆ ಹಾನಿಯಾಗಿದ್ದು, ಈ ಪೈಕಿ ಮೂವರು ಮನೆಗಳಿಗೆ ತೀವ್ರ ಹಾನಿ, 9 ಮನೆಗಳಿಗೆ ಭಾಗಶಃ ಹಾನಿ, ಮರ ಬಿದ್ದು ರಸ್ತೆಗಳಿಗೆ ಹಾನಿ, ಅಲ್ಲಲ್ಲಿ ಗುಡ್ಡ, ಆವರಣ ಗೋಡೆ ಕುಸಿತದ ಅವಘಡಗಳು ಸಂಭವಿಸಿದ್ದು, ಯಾವುದೇ ಪ್ರಾಣ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಘಟನಾ ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್.ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಳಿಗೆ ಮೂರ್ಜೆ-ವಾಮದಪದವು ರಸ್ತೆಯ ಕಲಾಬಾಗಿಲುನಲ್ಲಿ ಆಲದಮರವೊಂದು ರಸ್ತೆಗಡ್ಡವಾಗಿ ಬಿದ್ದು ರಸ್ತೆ ಸಂಪರ್ಕ ಕಡಿತಗೊಂಡಿತು. ಇರ್ವತ್ತೂರು ಗ್ರಾಪಂ, ಅರಣ್ಯ ಇಲಾಖೆ ವೇಣೂರು ವಲಯ, ಪುಂಜಾಲಕಟ್ಟೆ ಆರಕ್ಷಕ ಠಾಣೆ, ಮೆಸ್ಕಾಂ ವಗ್ಗ ಶಾಖೆ ಸಹಕಾರದಲ್ಲಿ ಮರವನ್ನು ತೆರವುಗೊಳಿಸಲಾಯಿತು. 

ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಚ್ಲಂಪ್ಪಾಡಿ ಪಳಿಕೆ ಎಂಬಲ್ಲಿ ವಾಸವಿರುವ ಚೋಮು ಎಂಬ ಮಹಿಳೆಯ ಮನೆಯು ಸಂಪೂರ್ಣವಾಗಿ ನಾಶವಾಗಿದ್ದು, ಈ ಬಡವರ ಬದುಕಿನಲ್ಲಿ ಅತಂತ್ರ ಸ್ಥಿತಿ ಎದುರಾಗಿದೆ.

ತೀವ್ರ ಗಾಳಿ ಮಳೆಯ ಕಾರಣ ಭಾರೀ ಸಂಖ್ಯೆಯ ಮೀನುಗಾರಿಕಾ ಬೋಟುಗಳು ಶುಕ್ರವಾರ ರಾತ್ರಿ ಲಂಗರು ಹಾಕಿವೆ. ಬಂದರು ಪ್ರವೇಶಿಸುವ ಸಮುದ್ರ ಬಾಗಿಲಿನಲ್ಲಿಯೇ ಸುಮಾರು 200 ಕ್ಕೂ ಬೋಟುಗಳು ನಿಂತಿರುವುದರಿಂದ ಕೋಸ್ಟ್ ಗಾಡ್೯ ರಕ್ಷಣಾ ನೌಕೆಗೆ ಸಮುದ್ರದಲ್ಲಿ ಪರಿಹಾರ ಮತ್ತು ಹುಡುಕಾಟ ( Rescue & search) ನಡೆಸಲು ಸಮುದ್ರಕ್ಕೆ ತೆರಳಲು ಅಡಚಣೆ ಯಾಗಿದೆ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮಳೆಯ ಅಬ್ಬರಕ್ಕೆ ಹಲವೆಡೆ ಹಾನಿ, ನಾಳೆಯೂ ಶಾಲೆ, ಕಾಲೇಜುಗಳಿಗೆ ರಜೆ, ಕಡಲಿಗಿಳಿಯದಂತೆ ಪ್ರವಾಸಿಗರಿಗೆ ಎಚ್ಚರಿಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*