ಪ್ರಮುಖ ಸುದ್ದಿಗಳು

ಮಳೆಯ ಅಬ್ಬರಕ್ಕೆ ಹಲವೆಡೆ ಹಾನಿ, ನಾಳೆಯೂ ಶಾಲೆ, ಕಾಲೇಜುಗಳಿಗೆ ರಜೆ, ಕಡಲಿಗಿಳಿಯದಂತೆ ಪ್ರವಾಸಿಗರಿಗೆ ಎಚ್ಚರಿಕೆ

ಸಸಿಹಿತ್ಲು ಬೀಚ್ ನಲ್ಲಿ ಮರಗಳು ಉರುಳಿರುವುದು.

www.bantwalnews.com Editor: Harish Mambady

ಜಾಹೀರಾತು

ಚಂಡಮಾರುತದ ಛಾಯೆ, ವಾಯುಭಾರ ಕುಸಿತದ ಪರಿಣಾಮ, ಶುಕ್ರವಾರ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಹಲವು ಪ್ರದೇಶಗಳಲ್ಲಿ ಹಾನಿ ಸಂಭವಿಸಿದೆ. ನಾಳೆ (ಅ.26ರಂದು) ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ. ಸಮುದ್ರದಲ್ಲಿ ಚಂಡಮಾರುತ ಸನ್ನಿವೇಶವು ಉದ್ಭವಿಸಿದ್ದು,  ಮುನ್ನೆಚ್ಚರಿಕೆಯ ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು 26ರಂದು ಎಲ್ಲ ಅಂಗನವಾಡಿ ಕೇಂದ್ರ, ಸರಕಾರಿ ಅನುದಾನಿತ, ಖಾಸಗಿ ವಿದ್ಯಾಸಂಸ್ಥೆ (ಪಪೂ ಕಾಲೇಜುವರೆಗೆ) ರಜೆ ಘೋಷಿಸಿದೆ.

ಸಾರ್ವಜನಿಕರಿಗೆ ಮುನ್ನೆಚ್ಚರಿಕೆ:

  • ನೀರು ಇರುವ ತಗ್ಗು ಪ್ರದೇಶ, ಕೆರೆ, ನದೀತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಎಚ್ಚರಿಕೆ ವಹಿಸುವುದು.
  • ಮೀನುಗಾರರಿಗೆ ಮುಂದಿನ ಮೂರು ದಿನಗಳವರೆಗೆ ಕಡ್ಡಾಯವಾಗಿ ಸಮುದ್ರಕ್ಕಿಳಿಯದಂತೆ ಸೂಚನೆ
  • ಪ್ರವಾಸಿಗರು, ಸಾರ್ವಜನಿಕರು ನದೀ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸುವುದು.
  • ತುರ್ತು ಸೇವೆಗೆ ಟೋಲ್ ಫ್ರೀ ನಂಬ್ರ 1077 ಗೆ ಕರೆ ಮಾಡಬಹುದು.

ಜಿಲ್ಲೆಯ ಹಲವೆಡೆ ಹಾನಿ:

ಜಾಹೀರಾತು

ದ.ಕ, ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಲವೆಡೆ ಹಾನಿ ಸಂಭವಿಸಿದೆ. ಬಂಟ್ವಾಳ ತಾಲೂಕಿನ ಒಟ್ಟು 12ಮನೆಗಳಿಗೆ ಹಾನಿಯಾಗಿದ್ದು, ಈ ಪೈಕಿ ಮೂವರು ಮನೆಗಳಿಗೆ ತೀವ್ರ ಹಾನಿ, 9 ಮನೆಗಳಿಗೆ ಭಾಗಶಃ ಹಾನಿ, ಮರ ಬಿದ್ದು ರಸ್ತೆಗಳಿಗೆ ಹಾನಿ, ಅಲ್ಲಲ್ಲಿ ಗುಡ್ಡ, ಆವರಣ ಗೋಡೆ ಕುಸಿತದ ಅವಘಡಗಳು ಸಂಭವಿಸಿದ್ದು, ಯಾವುದೇ ಪ್ರಾಣ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಘಟನಾ ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್.ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಳಿಗೆ ಮೂರ್ಜೆ-ವಾಮದಪದವು ರಸ್ತೆಯ ಕಲಾಬಾಗಿಲುನಲ್ಲಿ ಆಲದಮರವೊಂದು ರಸ್ತೆಗಡ್ಡವಾಗಿ ಬಿದ್ದು ರಸ್ತೆ ಸಂಪರ್ಕ ಕಡಿತಗೊಂಡಿತು. ಇರ್ವತ್ತೂರು ಗ್ರಾಪಂ, ಅರಣ್ಯ ಇಲಾಖೆ ವೇಣೂರು ವಲಯ, ಪುಂಜಾಲಕಟ್ಟೆ ಆರಕ್ಷಕ ಠಾಣೆ, ಮೆಸ್ಕಾಂ ವಗ್ಗ ಶಾಖೆ ಸಹಕಾರದಲ್ಲಿ ಮರವನ್ನು ತೆರವುಗೊಳಿಸಲಾಯಿತು. 

ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಚ್ಲಂಪ್ಪಾಡಿ ಪಳಿಕೆ ಎಂಬಲ್ಲಿ ವಾಸವಿರುವ ಚೋಮು ಎಂಬ ಮಹಿಳೆಯ ಮನೆಯು ಸಂಪೂರ್ಣವಾಗಿ ನಾಶವಾಗಿದ್ದು, ಈ ಬಡವರ ಬದುಕಿನಲ್ಲಿ ಅತಂತ್ರ ಸ್ಥಿತಿ ಎದುರಾಗಿದೆ.

ತೀವ್ರ ಗಾಳಿ ಮಳೆಯ ಕಾರಣ ಭಾರೀ ಸಂಖ್ಯೆಯ ಮೀನುಗಾರಿಕಾ ಬೋಟುಗಳು ಶುಕ್ರವಾರ ರಾತ್ರಿ ಲಂಗರು ಹಾಕಿವೆ. ಬಂದರು ಪ್ರವೇಶಿಸುವ ಸಮುದ್ರ ಬಾಗಿಲಿನಲ್ಲಿಯೇ ಸುಮಾರು 200 ಕ್ಕೂ ಬೋಟುಗಳು ನಿಂತಿರುವುದರಿಂದ ಕೋಸ್ಟ್ ಗಾಡ್೯ ರಕ್ಷಣಾ ನೌಕೆಗೆ ಸಮುದ್ರದಲ್ಲಿ ಪರಿಹಾರ ಮತ್ತು ಹುಡುಕಾಟ ( Rescue & search) ನಡೆಸಲು ಸಮುದ್ರಕ್ಕೆ ತೆರಳಲು ಅಡಚಣೆ ಯಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ