ಬಂಟ್ವಾಳ

ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ

ಜಾಹೀರಾತು

ಮಂಗಳವಾರ ರಾತ್ರಿ ಸುರಿದ ಗಾಳಿ ಮಳೆಗೆ ತಾಲೂಕಿನ ವಿವಿಧೆಡೆ ಹಾನಿ ಸಂಭವಿಸಿದೆ. ಬಾಳ್ತಿಲ ಗ್ರಾಮದ ಬಾಳ್ತಿಲ ಗ್ರಾಮದ ಗೋಪಿ ಎಂಬವರ ಮನೆ ತೀವ್ರ ಹಾನಿಯಾಗಿದೆ. ಅದೇ ಗ್ರಾಮದ ಚಂದಪ್ಪ ಪೂಜಾರಿ ಅವರ ಕಚ್ಚಾ ಮನೆಗೆ ಹಾನಿಯಾಗಿದ್ದರೆ, ಕುರಿಯಾಳ ಗ್ರಾಮದ ಚಂದ್ರಯ್ಯ ಆಚಾರಿ ಅವರ ಮನೆ ಭಾಗಶಃ ಹಾನಿಗೊಳಗಾಗಿದೆ. ವಿಟ್ಲ ಕಸಬಾ ಗ್ರಾಮದ ಗುಲಾಬಿ ಮನೆ ಭಾಗಶಃ ಹಾನಿಗೊಳಗಾಗಿದೆ. ಸಜೀಪಮುನ್ನೂರು ಗ್ರಾಮದ ರಾಜೇಂದ್ರಕುಮಾರ್ ಕಚ್ಚಾ ಮನೆಗೆ ಹಾನಿಯಾಗಿದೆ.

ಬಾಳ್ತಿಲ ಗ್ರಾಮದ ಕುರ್ಮಾನ್ ಗೋಪಿ ಪೂಜಾರಿ ಅವರ ಮನೆ ಸಂಪೂರ್ಣ ಕುಸಿದು ಬಿದ್ದು ಹೋಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ತಹಸೀಲ್ದಾರ್ ರಶ್ಮಿ, ಅರ್.ಎಸ್.ಎಸ್.ಪ್ರಮುಖ ಡಾ. ಪ್ರಭಾಕರ ಭಟ್, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮತ್ತಿತರರು ಭೇಟಿ ನೀಡಿದರು. ಸಿಡಿಲಿಗೆ ಕುರಿಯಾಳ ಗ್ರಾಮದ ಪುಲ್ಲಾಜೆ ಎಂಬಲ್ಲಿ ಚಂದ್ರಯ್ಯ ಆಚಾರ್ಯ ಮನೆಗೆ ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮಕರಣಿಕ ಅಮೃತಾಂಶು ಕೆ.ಎಸ್., ಪಂಚಾಯತ್ ಅಧ್ಯಕ್ಷ ಹರೀಶ್ ಶೆಟ್ಟಿ ಪಡು ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಸಂದೀಪ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ