ಕಡೇಶಿವಾಲಯದಲ್ಲಿ ಸಂಭ್ರಮದ ದೀಪಾವಳಿ

ಕಡೇಶಿವಾಲಯ ಕ್ಷೇತ್ರದಲ್ಲಿ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಹಾಗೂ ಶ್ರೀರಾಮಚಂದ್ರನಲ್ಲಿ ಪ್ರಾರ್ಥಿಸಲಾಯಿತು. ಅಧ್ಯಾಪಕ  ಭಾಸ್ಕರ್ ನಾಯ್ಕ್ ದೀಪ ಬೆಳಗಿಸಿದರೆ, ಕಾರ್ತಿಕ್ ಮೇರ್ಲ ಕ್ರೀಡಾಂಗಣವನ್ನು ಉದ್ಘಾಟಿಸಿದರು.

ಮಾಣಿ ಹಾಗೂ ಪೆರ್ನೆ ಮಂಡಲದ ತಂಡಗಳಿಗೆ ಲಗೋರಿ ಪಂದ್ಯಾಟ ನಡೆಯಿತು.ನಂತರ ಬಾಲಕರ ಕಬ್ಬಡ್ಡಿ ಬಾಲಕಿಯರ ಒಂಟಿಕಾಲಿನ ಓಟ, ಕೆರೆದಡ, ಸಂಗೀತ ಕುರ್ಚಿ, ಕುಸ್ತಿ, ತಪ್ಪಾಂಗಾಯಿ, ಪುರುಷರ ಗುಂಡೆಸೆತದ ಬಳಿಕ ತುಳಸಿಪೂಜೆ ಹಾಗೂ ಗೋಪೂಜೆ ನೆರವೇರಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆಯಲ್ಲಿ ಭಾರತ ಮಾತಾ ಪೂಜನಾ ನಡೆಯಿತು. ಹಿಂದು ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ, ನರಸಿಂಹ ಮಾಣಿ, ಗಣರಾಜ್ ಭಟ್ ಕೆದಿಲ, ಮನೋಜ್ ಪೆರ್ನೆ, ವಿಟ್ಲ ಪ್ರಖಂಡ ಭಜರಂಗದಳ ಸಂಚಾಲಕ ಅಕ್ಷಯ ರಜಪೂತ್, ಹಿಂದೂ ಸಂರಕ್ಷಣಾ ಸಮಿತಿ ಮಂಗಳೂರು ಅಧ್ಯಕ್ಷ ಕೆ.ಆರ್ ಶೆಟ್ಟಿ ಅಡ್ಯಾರ್ ಪದವು, ಬಿಜೆಪಿ ಮುಖಂಡ ದಿನೇಶ್ ಅಮ್ಟೂರು, ಅಮೃತಸಂಜೀವಿನಿ ಸೇವಾಸಂಸ್ಥೆಯ ಸದಸ್ಯರು ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು. ಸಂಜೀವಿನಿ ಸದಸ್ಯ ಅಲೋಕಿತ್ ಶೆಟ್ಟಿ ರ ಹುಟ್ಟುಹಬ್ಬ ಪ್ರಯುಕ್ತ ಆಯ್ದ ಬಡಮಕ್ಕಳಿಗೆ ಪುಸ್ತಕ ಹಸ್ತಾಂತರಿಸಲಾಯಿತು. ಅಹರ್ಶಿನಿಯಾಗಿ ಪುರುಷರ ಕಬ್ಬಡ್ಡಿ ಹಾಗೂ ಹಗ್ಗಜಗ್ಗಾಟ ಪಂದ್ಯಾಟ ನೆರವೇರಿತು ಈ ಸಂದರ್ಭದಲ್ಲಿ ಕಬಡ್ಡಿ ತರಬೇತುದಾರ ದೀಪಕ್ ಬೋಳಂತೂರು ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಮನ್ಮಥ ಶೆಟ್ಟಿ ಪುತ್ತೂರು ಕಾರ್ಯಕ್ರಮ ನಿರೂಪಿಸಿದರು. ಸೆಲ್ಫೀ ವಿಥ್ ಗುರುಸ್ವರೂಪಿ ಸ್ಪರ್ಧೆಯಲ್ಲಿ ಸುಮಾರು 400 ಕ್ಕೂ ಮಿಕ್ಕಿ ಸ್ಪರ್ಧಾಳುಗಳು ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಡೇಶಿವಾಲಯದಲ್ಲಿ ಸಂಭ್ರಮದ ದೀಪಾವಳಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*