ಬಂಟ್ವಾಳ

ಪಡಿತರ ಚೀಟಿ ದಂಡ ವಸೂಲು: ಸಿಎಂ ಜೊತೆ ಚರ್ಚೆ – ಕೋಟ

  • ಇಲಾಖೆ ಕ್ರಮದಿಂದ ಬಡವರಿಗೆ ತೊಂದರೆ – ರಾಜೇಶ್ ನಾಯ್ಕ್ ಮನವರಿಕೆ

ಪಡಿತರ ಚೀಟಿ ಅನರ್ಹವಿದ್ದರೆ ರದ್ಧತಿಗೆ ಸಂಬಂಧಪಟ್ಟಂತೆ ದಂಡ ವಸೂಲು ಮಾಡುವ ಕ್ರಮದ ಪರಿಶಿಲನೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಸಿಎಂ ಜೊತೆ ಚರ್ಚೆ ನಡೆಸುವುದಾಗಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಜಾಹೀರಾತು

ಬಂಟ್ವಾಳಕ್ಕೆ ಸಚಿವರು ಶನಿವಾರ ಶಾಸಕರ ಕಚೇರಿಗೆ ಭೇಟಿ ನೀಡಿದ್ದು, ಈ ಸಂದರ್ಭ, ಅನರ್ಹ ಪಡಿತರ ಚೀಟಿ ರದ್ದತಿಗೆ ದಂಡ ವಸೂಲಾತಿ ಕೈಬಿಡುವಂತೆ ಬಂಟ್ವಾಳ ಶಾಸಕ ನಾಯ್ಕ್ ಒತ್ತಾಯಿಸಿದರು. ಇಲಾಖೆಯ ಈ ಕ್ರಮದಿಂದ ಬಡವರ್ಗದ ಜನರಿಗೆ ಆಗುತ್ತಿರುವ ತೊಂದರೆ ಬಗ್ಗೆ ವಿವರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಸಚಿವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಅವರಲ್ಲಿ ಮಾತುಕತೆ ನಡೆಸಿ ದಂಡ ವಸೂಲಾತಿಯ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ತಿಳಿಸಿ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರೊಂದಿಗೆ ವಿಷಯದ ಬಗ್ಗೆ ಪ್ರಸ್ತಾಪಿಸುವುದಾಗಿ ತಿಳಿಸಿದರು. ದಂಡ ವಸೂಲಾತಿಯ ಬಗ್ಗೆ ಸರಕಾರದಿಂದ ನೀಡಲಾದ ಆದೇಶ-ಸುತ್ತೋಲೆ ತಕ್ಷಣ ತನಗೆ ಕಳುಹಿಸಿಕೊಡುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.