ಬಂಟ್ವಾಳ

ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ವಿಶ್ವರೂಪ ದರ್ಶನ

ವಿಡಿಯೋ ಕೃಪೆ: ಶ್ರೀಪ್ರಸಾದ್ ಬಂಟ್ವಾಳ sritalkis.

ಜಾಹೀರಾತು

ಭಾನುವಾರ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಮುಂಜಾನೆ ನಡೆದ ದೇವರ ವಿಶ್ವರೂಪ ದರ್ಶನ ಸೇವೆ ಸೇರಿದ್ದ ಭಗವದ್ಭಕ್ತರ ಕಣ್ಮನ ಸೆಳೆಯಿತು.

ವಟಪುರ ಕ್ಷೇತ್ರವಾದ ದೇವಸ್ಥಾನದಲ್ಲಿ ಭಾನುವಾರ ಮುಂಜಾನೆ ಭಕ್ತರು ಸಾಲು ಹಣತೆಗಳಿಂದ ಬೆಳಗಿಸಲ್ಪಟ್ಟ ವಿಶ್ವರೂಪ ದರ್ಶನ ಬೆಳಕಿನ ಲೋಕವನ್ನೇ ಸೃಷ್ಟಿಸಿತು. ಮುಂಜಾನೆಯ ಬ್ರಾಹ್ಮೀ ಮುಹೂರ್ತದಲ್ಲಿ ಭಜಕರು ದೇವಳದ ಸುತ್ತ ಅಳವಡಿಸಿದ ಹಣತೆಯನ್ನು ಬೆಳಗಿಸಿದರು.

ದೇವಳದ ಒಳಾಂಗಣವನ್ನು ಹಾಗೂ ಮಲ್ಲಿಗೆಪ್ರಿಯ ಶ್ರೀ ವೆಂಕಟರಮಣ ದೇವರನ್ನು ಸಿಂಗರಿಸಿದ್ದರೆ ಅದನ್ನು ವೀಕ್ಷಿಸಲು ಊರಪರವೂರಿನ ಭಕ್ತರು ಮತ್ತು ಮಕ್ಕಳು ಆಗಮಿಸಿದ್ದರು. ದೇವಳದ ಹೊರಾಂಗಣದಲ್ಲಿ ಶಂಖ, ಚಕ್ರ, ಗದಾ, ಪದ್ಮ, ಕೊಡಲಿ, ತಾವರೆ, ಮೊದಲಾದ ಚಿತ್ರ ಚಿತ್ತಾರಗಳು ಹಣತೆಗಳಿಂದ ರೂಪ ಪಡೆದವು. ದೇವಳದ ಆಡಳಿತ ಮೊಕ್ತೇಸರರು, ಮೊಕ್ತೇಸರರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts