ಬಿಪಿಎಲ್ ಅನರ್ಹವಾದರೆ, ಬಳಸಿದ ಅಕ್ಕಿ ಆಧರಿಸಿ ದಂಡ ಯಾಕೆ? – ತಾಪಂ ಸಭೆಯಲ್ಲಿ ಖಾದರ್ ತರಾಟೆ

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು

ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ದೊರಕುವ ಅಕ್ಕಿಯ ಕುರಿತು ಗೊತ್ತೇ ಇದೆ. ಆದರೆ ನಿಯಮಾವಳಿಯನ್ನು ಕಠಿಣವಾಗಿ ಪಾಲಿಸುವ ಸಂದರ್ಭ ಕಾರ್ಡು ಅನರ್ಹವೇನಾದರೂ ಆದರೆ, ಅದಕ್ಕೆ ವಿಧಿಸುವ ದಂಡ ಹೇಗೆ?

ಬುಧವಾರ ಬಂಟ್ವಾಳ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಉಪಸ್ಥಿತರಿದ್ದ ಶಾಸಕ ಯು.ಟಿ.ಖಾದರ್ ಹೀಗೆ ಅಧಿಕಾರಿಗಳನ್ನು ಪ್ರಶ್ನಿಸಿದಾಗ, ಅವರು ಬಳಸಿದ ಅಕ್ಕಿಗೆ ದಂಡ ವಿಧಿಸುತ್ತೇವೆ ಎಂದು ಉತ್ತರಿಸಿದರು. ಇಂಥದ್ದು ವಿಶ್ವದಲ್ಲೇ ಮೊದಲು ಎಂದು ಟೀಕಿಸಿದ ಖಾದರ್, ಉಚಿತವಾಗಿ ಕೊಡುವ ಅಕ್ಕಿಗೂ ದಂಡ ವಸೂಲು ಮಾಡುವ ವಿಧಾನಕ್ಕೆ ಆಕ್ಷೇಪ ಸೂಚಿಸಿದ ಘಟನೆ ನಡೆಯಿತು.

ಬಿಪಿಎಲ್ ಕಾರ್ಡು ಅನರ್ಹತೆ, ತಾಲೂಕು ಪಂಚಾಯತ್ ಸುಪರ್ದಿಯಲ್ಲಿ ಇರುವ ಜಾಗ, ತಾಪಂ ಸದಸ್ಯರು ಇನ್ನೂ ಲೋಕಾಯುಕ್ತಕ್ಕೆ ತಮ್ಮ ಆಸ್ತಿ ವಿವರ ಘೋಷಣೆ ಮಾಡದಿರುವುದು, ಬಂಟ್ವಾಳ – ಸೋರ್ನಾಡು ರಸ್ತೆ ರಿಪೇರಿ, ಮುಗಿಯದ ಸರ್ವರ್ ಸಮಸ್ಯೆ, ಗ್ರಾಮಮಟ್ಟದಲ್ಲಿ ನಡೆಯುವ ಕೆಡಿಪಿ ಸಭೆಗಳಿಗೆ ಅಧಿಕಾರಿಗಳು ಬಾರದೇ ಇರುವ ಕುರಿತು ವಿಚಾರಗಳು ಪ್ರಸ್ತಾಪಗೊಂಡವು. ಶಿಥಿಲ ಅಂಗನವಾಡಿ, ಆಧಾರ್ ಗೊಂದಲ ಸಹಿತ ಪ್ರತಿ ಬಾರಿಯೂ ಪ್ರಸ್ತಾಪಗೊಳ್ಳುವ ಅಡಕೆ ಕೊಳೆ ರೋಗಕ್ಕೆ ಬಾರದ ಪರಿಹಾರ ವಿಚಾರಗಳು ಮಂಡನೆಯಾದವು.

ಜಾಹೀರಾತು

ಜಿಪಂ ಸದಸ್ಯರಾದ ಎಂ.ಎಸ್.ಮಹಮ್ಮದ್, ಕಮಲಾಕ್ಷಿ ಪೂಜಾರಿ, ತಾಪಂ ಸದಸ್ಯರಾದ ಪ್ರಭಾಕರ ಪ್ರಭು, ಉಸ್ಮಾನ್ ಕರೋಪಾಡಿ, ಹೈದರ್ ಕೈರಂಗಳ, ಆದಂ,  ರಮೇಶ್ ಕುಡ್ಮೇರು, ಸಂಜೀವ ಪೂಜಾರಿ, ಗ್ರಾಪಂ ಅಧ್ಯಕ್ಷರಾದ ರಮ್ಲಾನ್, ರಾಜೇಶ್ ಬಾಳೇಕಲ್ಲು ವಿವಿಧ ವಿಷಯ ಪ್ರಸ್ತಾಪಿಸಿದರು.

ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ ಉಪಸ್ಥಿತರಿದ್ದರು. ಈ ಸಂದರ್ಭ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ನಡೆಯಿತು. ಮಲ್ಲಿಕಾ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು. ನಿರ್ಗಮನ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ ಉಪಸ್ಥಿತರಿದ್ದರು. ಇದೇ ವೇಳೆ ಇಒ ರಾಜಣ್ಣ ತಾಪಂ ಜಾಗದ ವಿಚಾರಗಳನ್ನು ಸಭೆಗೆ ಮಂಡಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿಪಿಎಲ್ ಅನರ್ಹವಾದರೆ, ಬಳಸಿದ ಅಕ್ಕಿ ಆಧರಿಸಿ ದಂಡ ಯಾಕೆ? – ತಾಪಂ ಸಭೆಯಲ್ಲಿ ಖಾದರ್ ತರಾಟೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*