ಕಲ್ಲಡ್ಕ

ಪ್ರತಿಭಾ ಕಾರಂಜಿ ಬಂಟ್ವಾಳ, ಪುತ್ತೂರು, ಬೆಳ್ತಂಗಡಿಗೆ ಸಮಗ್ರ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ – ಪ್ರತಿಭಾ ಕಲರವ ಸಮಾರೋಪ ಬುಧವಾರ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಪ್ರೌಢಶಾಲಾ ವಿಭಾಗದ ಸಮಗ್ರ ಪ್ರಶಸ್ತಿ ಬಂಟ್ವಾಳ ತಾಲೂಕು ಪಡೆದುಕೊಂಡರೆ, ಪ್ರಾಥಮಿಕ ಶಾಲೆಯ ಹಿರಿಯ ವಿಭಾಗದಲ್ಲಿ ಪುತ್ತೂರು ಹಾಗೂ ಕಿರಿಯ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕು ಸಮಗ್ರ ಪ್ರಶಸ್ತಿ ಪಡೆದುಕೊಂಡಿತು.

ಜಾಹೀರಾತು

ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ   ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ  ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯನ್ನು ಬಂಟ್ವಾಳ ತಾಲೂಕಿನ ಶಿಕ್ಷಣ ಇಲಾಖೆ ಹಾಗೂ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಅರ್ಥಪೂರ್ಣವಾಗಿ, ಶಿಸ್ತುಬದ್ಧವಾಗಿ ಆಯೋಜನೆ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದೆ  ಎಂದು ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ  ಉಪಾಧ್ಯಕ್ಷ ರಾಮಕೃಷ್ಣ ಶಿರೂರು ಈ ಸಂದರ್ಭ ಹೇಳಿದರು.

ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಸಂಚಾಲಕ ಜೆ.ಪ್ರಹ್ಲಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ಪರ್ಧಾ ಕಾರ್ಯಕ್ರಮಗಳೆಲ್ಲವೂ ಮಕ್ಕಳ ಸಂಭ್ರಮದ ಭಾಗವಹಿಸುವಿಕೆಯೊಂದಿಗೆ ನಡೆದಿರುವುದು ಖುಷಿ ಕೊಟ್ಟಿದೆ ಎಂದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಮಾತನಾಡಿ, ಇಲಾಖೆಯ ಕಾರ್ಯಕ್ರಮವನ್ನು ತಮ್ಮ ಮನೆಯ ಕಾರ್ಯಕ್ರಮ ಎಂಬಂತೆ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ  ಸಂಚಾಲಕರು ಮತ್ತು ಅವರ ತಂಡ ನಿರ್ವಹಿಸಿರುವುದು ನಮ್ಮೆಲ್ಲರಿಗೂ ಸ್ಪೂರ್ತಿ ಎಂದರು. ತಾ.ಪಂ.ಸದಸ್ಯೆ ಮಂಜುಳಾ ಕುಶಲ ಪೆರಾಜೆ,  ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್,  ಮಾಣಿ ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷ ಬಿ.ಎಸ್.ನಾಯ್ಕ್, ಕಾರ್ಯದರ್ಶಿ ನಾರಾಯಣ ಶೆಟ್ಟಿ ಕೊಂಬಿಲ, ಆಡಳಿತಾಧಿಕಾರಿ ಸಿ.ಶ್ರೀಧರ್, ಸಮನ್ವಯಾಧಿಕಾರಿ ರಾಧಾಕೃಷ್ಣ ಭಟ್ , ವಿವಿಧ ಶಿಕ್ಷಕ-ಶಿಕ್ಷಣ ಸಂಘಟನೆಗಳ ಪದಾಧಿಕಾರಿಗಳಾದ ಚೆನ್ನಕೇಶವ,  ಜತ್ತಪ್ಪ ಗೌಡ,   ರಮಾನಂದ,  ಕಲ್ಲಡ್ಕ ಶಾಲಾ ಮುಖ್ಯಶಿಕ್ಷಕ ಎ.ಅಶ್ರಫ್, ಪ್ರವೀಣ್  ಮುರಳೀಕೃಷ್ಣ,  ಸಿ.ಆರ್.ಪಿ ಸತೀಶ್, ತಾಲೂಕು ನೋಡಲ್ ಅಧಿಕಾರಿ ಸುಶೀಲಾ , ಶಾಲಾ ಮುಖ್ಯ ಶಿಕ್ಷಕಿ ಗ್ರೇಸ್ ಪಿ ಸಲ್ದಾನ, ತಾಲೂಕಿನ ಎಲ್ಲಾ ಬಿಆರ್ ಪಿ, ಸಿಆರ್ ಪಿ ಹಾಗೂ ಶಿಕ್ಷಣ ಸಂಯೋಜಕರು  ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು

ಪ್ರೌಢಶಾಲಾ ಮುಖ್ಯಶಿಕ್ಷಕಿ ವಿಜಯಲಕ್ಷ್ಮೀ‌ವಿ.ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ನೋಡಲ್ ಅಧಿಕಾರಿ ಶೋಭಾ ಎನ್ ವಂದಿಸಿದರು. ಶಿಕ್ಷಕಿಯರಾದ ರಶ್ಮೀ ಫರ್ನಾಂಡೀಸ್, ಶೋಭಾ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ