ಬಂಟ್ವಾಳ: ಪ್ರತ್ಯೇಕ ಅಪಘಾತದಲ್ಲಿ ವಾಹನ ಡಿಕ್ಕಿಯಾಗಿ ಇಬ್ಬರು ಗಾಯಗೊಂಡ ಕುರಿತು ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. ಎರಡೂ ಘಟನೆಗಳು ಬುಧವಾರ ನಡೆದಿವೆ.
ಬ್ರಹ್ಮರಕೂಟ್ಲು ಸಮೀಪ ಮದುವೆಯೊಂದಕ್ಕೆ ಬಂದು ರಸ್ತೆ ದಾಟುತ್ತಿದ್ದ ಸಂದರ್ಭ ಬೈಕೊಂದು ಡಿಕ್ಕಿಯಾಗಿ ಪೆರ್ಲಂಪಾಡಿ ಕೊಳ್ತಿಗೆ ಕಲಾಯಿ ನಿವಾಸಿ ದಿನೇಶ್ (60) ಎಂಬವರು ಗಾಯಗೊಂಡಿದ್ದಾರೆ. ಮಧ್ಯಾಹ್ನ ಘಟನೆ ನಡೆದಿದೆ. ಫರಂಗಿಪೇಟೆಯಲ್ಲಿ ನಿಂತಿದ್ದ ವೇಳೆ ಇರಾ ಸಮೀಪ ಕಲ್ಲಾಜೆ ಮನೆಯ ನಾರಾಯಣ ಪೂಜಾರಿ (65) ಎಂಬವರಿಗೆ ಮಂಗಳೂರು ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಘಟನೆ ಬುಧವಾರ ಬೆಳಗ್ಗೆ ನಡೆದಿದ್ದು, ಗುರುವಾರ ಪ್ರಕರಣ ದಾಖಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ"