ಕಲ್ಲಡ್ಕದಲ್ಲಿ ಜಿಲ್ಲಾ ಮಟ್ಟದ ಶೈಕ್ಷಣಿಕ, ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ

ದ.ಕ.ಜಿಪಂ ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಾ ಅಭಿಯಾನ, ಕ್ಷೇತ್ರ ಸಂಪನ್ಮೂಲ ಕೇಂದ್ರ, ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖಾ ವೃತ್ತಿಶಿಕ್ಷಣ ಶಿಕ್ಷಕರ ಸಂಘ ವತಿಯಿಂದ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ ನಡೆಯಿತು.

kalladka srirama high school

ಕಸದಿಂದರಸ ಮಾಡುವ ಪರಿಕಲ್ಪನೆಯೇ ವೃತ್ತಿ ಶಿಕ್ಷಣ. ಜೀವನದಲ್ಲಿ ಹೊಸತನವನ್ನುಕಾಣಲು ವೃತ್ತಿ ಶಿಕ್ಷಣ ಅಗತ್ಯ, ಅಂತರದಲ್ಲಿ ಹುದುಗಿ ಸುಪ್ತ ಪ್ರತಿಭೆಯನ್ನು ಹೊರತಂದು ಹೊಸತನವನ್ನು ಸೃಷ್ಟಿ ಮಾಡುವುದರ ಮೂಲಕ ಜೀವನದ ಆನಂದ ಸಂತೋಷವನ್ನುಅನುಭವಿಸಬೇಕು ಎಂದು ಕಾರ್ಯಕ್ರಮ ಉದ್ಘಾಟಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಈ ಸಂದರ್ಭ ನುಡಿದರು.

ಜಾಹೀರಾತು

ಕನ್ನಡ ವಿಷಯ ಪರಿವೀಕ್ಷಕ ಶಮಂತ್ ಮಾತನಾಡಿ, ವೃತ್ತಿಕ್ಷಣವನ್ನುಕಲಿತರೆ ಮುಂದಾಗು ದೊಡ್ಡ ಅನಾಹುತವನ್ನು ತಪ್ಪಿಸಬಹುದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವೃತ್ತಿ ಶಿಕ್ಷಣದ ಮೂಲ ಪರಿಕಲ್ಪನೆಕೊಟ್ಟವರುಗಾಂಧೀಜಿಯವರು, ಶಿಕ್ಷಣ ಕೇವಲ ಭೌತಿಕಜ್ಞಾನವಲ್ಲ ಬದಲಾಗಿ ನೈತಿಕ, ಸಾಂಸ್ಕೃತಿಕ, ವೈಜ್ಞಾನಿಕ, ವೈಚಾರಿಕ, ಸಾಮಾಜಿಕ, ಬೆಳವಣಿಗೆಗೆ ದಾರಿಮಾಡಿಕೊಡುತ್ತದೆ ಎಂದರು.
ಕನ್ನಡಾಂಬೆ ಭುವನೇಶ್ವರಿಯ ಪ್ರತಿಮೆಯನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಮೇಶ್ ಕಲ್ಲಡ್ಕ ಮತ್ತು ಹಿರಿಯ ವಿದ್ಯಾರ್ಥಿ ನಿತಿನ್ ಕಲ್ಲಡ್ಕ ಅನಾವರಣಗೊಳಿಸಿದರು.

ಕಾರ್‍ಯಕ್ರಮದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ್ ಮಾಧವ, ವಯಸ್ಕರ ಶಿಕ್ಷಣಾಧಿಕಾರಿಯಾದ ಸುಧಾಕರ್ ಕೆ, ವಸ್ತು ಪ್ರದರ್ಶನ ನೋಡಲ್ ಅಧಿಕಾರಿ ಶೊಭಾ ಎನ್, ಬಂಟ್ವಾಳದ ಕ್ಷೇತ್ರ ಸಮನ್ವಯಅಧಿಕಾರಿ ರಾಧಾಕೃಷ್ಣ, ಶ್ರೀರಾಮ ವಿದ್ಯಾಕೇಂದ್ರ ಸಹಸಂಚಾಲಕರಾದ ರಮೇಶ್‌ಎನ್, ಕಲ್ಲಡ್ಕ ಲಕ್ಷ್ಮೀಗಣೇಶ್ ಹೋಟೇಲಿನ ಮಾಲಿಕರಾದ ರಾಜೇಂದ್ರ ಹೊಳ್ಳ, ಮೈಸ್ ಸಂಸ್ಥೆಯ ಮಾಲಕರಾದ ರಮೇಶ್ ಪೂಜಾರಿ, ಸಂಭ್ರಮ ಎಲೆಕ್ಟ್ರಾನಿಕ್‌ನ ಮಾಲಕರಾದ ಗಿರೀಶ್ ನೆಟ್ಲ, ದಕ್ಷಿಣಕನ್ನಡ ಜಿಲ್ಲಾಚಿತ್ರಕಲಾ ಸಂಘದಅಧ್ಯಕ್ಷರಾದ ಚೆನ್ನಕೇಶವ, ಬಂಟ್ವಾಳ ತಾಲೂಕು ಚಿತ್ರಕಲಾ ಸಂಘದ ಅಧ್ಯಕ್ಷರಾದ ಮುರಳಿ ಕೃಷ್ಣ, ಶಿಕ್ಷಣ ಸಂಯೋಜಕರಾದ ಸುಶೀ, ಬಂಟ್ವಾಳ ತಾಲೂಕು ಮುಖ್ಯೋಪಾದ್ಯಾಯರ ಸಂಘದ ಅಧ್ಯಕ್ಷರಾದ ರಮಾನಂದ, ಶ್ರೀರಾಮ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ವಸಂತಿಕುಮಾರಿ ಉಪಸ್ಥಿತರಿದ್ದರು. ದೇವದಾಸ್ ಕೆ. ಸ್ವಾಗತಿಸಿದರು. ಸುಫಲಾ ಬಿ. ವಂದಿಸಿದರು. ಜಿನ್ನಪ್ಪ ಏಳ್ತಿಮಾರ್ ಕಾರ್ಯಕ್ರಮ ನಿರೂಪಿಸಿದರು.

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕಲ್ಲಡ್ಕದಲ್ಲಿ ಜಿಲ್ಲಾ ಮಟ್ಟದ ಶೈಕ್ಷಣಿಕ, ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*