ಪುಂಜಾಲಕಟ್ಟೆಯಲ್ಲಿ ನ.16, 17ರಂದು ಪ್ರೊ ಕಬಡ್ಡಿ ಉತ್ಸವ

ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 36 ನೇ ವರ್ಷದ ಪ್ರಯುಕ್ತ .. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಡಾ. .ಪಿ.ಜೆ. ಅಬ್ದುಲ್ ಕಲಾಂ ಪ್ರಶಸ್ತಿಸ್ವಸ್ತಿಕ್ ಪ್ರೊ ಕಬಡ್ಡಿ ಉತ್ಸವ . 16 ಮತ್ತು . 17ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ  ಜರಗಲಿದೆ ಎಂದು ಕ್ಲಬ್ ಸ್ಥಾಪಕಾಧ್ಯಕ್ಷ, ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ತಿಳಿಸಿದ್ದಾರೆ.

ಜಾಹೀರಾತು

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ವಿವರ ನೀಡಿದರು. ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಡಾ. .ಪಿ.ಜೆ. ಅಬ್ದುಲ್ ಕಲಾಂ ಹೆಸರಿನಲ್ಲಿ ಕಬಡ್ಡಿ ಪಂದ್ಯಾಟ ನಡೆಯಲಿದ್ದು, ವಿವಿಧ ಏಳು ವಿಭಾಗದಲ್ಲಿ ಪ್ರೊ ಮಾದರಿಯ ಮ್ಯಾಟ್ ಕಬಡ್ಡಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಪ್ರೌಢ, ಪದವಿ ಪೂರ್ವ ಕಾಲೇಜು ಬಾಲಕಬಾಲಕಿಯರ ವಿಭಾಗ, ಮುಕ್ತ ವಿಭಾಗದಲ್ಲಿ ಪುರುಷರ ಮತ್ತು ಮಹಿಳೆಯರ ಕಬಡ್ಡಿ ಪಂದ್ಯಾಟ, ಅಂತಾರಾಜ್ಯ ಮಟ್ಟದ ೬೦ ಕೆ.ಜಿ. ವಿಭಾಗದ ಪುರುಷರ ಕಬಡ್ಡಿ ಪಂದ್ಯಾಟ ನಡೆಯಲಿದೆ. ಅಂತಾರಾಜ್ಯ ಮಟ್ಟದ ೬೦ ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ, ಹರಿಯಾಣ , ಗುಜರಾತ್, ಕೇರಳ ಮೊದಲಾದ ರಾಜ್ಯಗಳ ತಂಡಗಳು ಭಾಗವಹಿಸಲಿವೆ ಎಂದು ಹೇಳಿದರು.     

. 16 ರಂದು ಬೆಳಗ್ಗೆ ಪ್ರೌಢ ಮತ್ತು ಪಿಯು ವಿಭಾಗದ ಕಬಡ್ಡಿ ಪಂದ್ಯಾಟ ನಡೆಯಲಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಅವರು ಕ್ರೀಡಾ ಜ್ಯೋತಿ ಉದ್ಘಾಟಿಸಲಿರುವರು. ಬೆಂಗಳೂರು ನ್ಯಾಯಾಧೀಶ ದಿನೇಶ್ ಹೆಗ್ಡೆ ಅವರು ಅಧ್ಯಕ್ಷತೆ ವಹಿಸಲಿರುವರು. ಉದ್ಯಮಿ ಅಶ್ವತ್ ಹೆಗ್ಡೆ  ಕ್ರೀಡಾಂಗಣ ಉದ್ಘಾಟಿಸಲಿರುವರು. ಸಂಜೆ ನಡೆಯಲಿರುವ ೬೦ ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟವನ್ನು ಸೌದಿ ಅರೆಬಿಯಾ  ಉದ್ಯಮಿ ಮಹಮ್ಮದ್ ಷರೀಫ್ಉದ್ಘಾಟಿಸಲಿರುವರು. ಮುಂಬಯಿ ಉದ್ಯಮಿ ಕಾಪು ಜಯರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿರುವರು.

ಜಾಹೀರಾತು

. 17ರಂದು ಬೆಳಗ್ಗೆ ಮುಕ್ತ ವಿಭಾಗದ ಕಬಡ್ಡಿ ಪಂದ್ಯಾಟವನ್ನು ಮುಂಬಯಿ ಉದ್ಯಮಿ ನಿತ್ಯಾನಂದ ಹೆಗ್ಡೆ ಮಾಲಾಡಿ ಅವರು ಉದ್ಘಾಟಿಸಲಿರುವರು. ಬೆಳ್ತಂಗಡಿ ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಅಧ್ಯಕ್ಷ ರಂಜನ್ ಗೌಡ ಅಧ್ಯಕ್ಷತೆ ವಹಿಸಲಿರುವರು. ಸುಧಾಕರ ಶೆಣೈ ಖಂಡಿಗ  ಕ್ರೀಡಾಂಗಣ ಉದ್ಘಾಟಿಸಲಿರುವರು. ಸಂಜೆ ಸಮಾರೋಪದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಅಧ್ಯಕ್ಷತೆ ವಹಿಸಲಿರುವರು.ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಶಸ್ತಿ ಪ್ರಧಾನ ಮಾಡಲಿರುವರು. ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಪಿ. ಸುಬ್ರಹ್ಮಣ್ಯ ಎಡಪಡಿತ್ತಾಯ ಬಹುಮಾನ ವಿತರಿಸಲಿರುವರು

ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರಾದ ರಾಮಚಂದ್ರ ರಾವ್, ರೋಹಿನಾಥ ಪಾದೆ, ರೋನ್ಸ್ ಬಂಟ್ವಾಳ, ಹಸನಬ್ಬ ಚಾರ್ಮಾಡಿ, ಋತ್ವಿಕ್ ಅಲೆವೂರಾಯ ಅವರಿಗೆ ಡಾ..ಪಿ.ಜೆ.ಅಬ್ದುಲ್ ಕಲಾಂ ಪ್ರಶಸ್ತಿ, ಪ್ರಭಾಕರ ಪೊಸಂದೋಡಿ, ಪ್ರದೀಪ್ ಕುಮಾರ್ ಶೆಟ್ಟಿ ಬೀಯಂತ್ಬೆಟ್ಟು, ಚಂದ್ರಹಾಸ ಬಳೆಂಜ, ತನ್ವಿತ್ ಕುಲಾಲ್ ಕೋಟೆಬಾಗಿಲು, ಅನನ್ಯಾ ಕಾವಳಕಟ್ಟೆ, ಅನ್ನಪೂರ್ಣ, ಶ್ರಾವ್ಯಾ ಅವರಿಗೆ ಡಾ..ಪಿ.ಜೆ.ಅಬ್ದುಲ್ ಕಲಾಂ ಪುರಸ್ಕಾರ ನೀಡಲಾಗುವುದು ಎಂದು ಅವರು ಹೇಳಿದರು.

ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ,ಪದಾಧಿಕಾರಿಗಳಾದ ರಾಜೇಶ್ ಪಿ., ಸಂತೋಷ್ ಕುಮಾರ್ ಮೂರ್ಜೆ, ಕಾವಳಮೂಡೂರು ಗ್ರಾ.ಪಂ.ಸದಸ್ಯ ಮೋಹನ ಆಚಾರ್ಯ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪುಂಜಾಲಕಟ್ಟೆಯಲ್ಲಿ ನ.16, 17ರಂದು ಪ್ರೊ ಕಬಡ್ಡಿ ಉತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*