ಬಂಟ್ವಾಳ

ಶಾಸಕ ರಾಜೇಶ್ ನಾಯ್ಕ್ ರಿಂದ ಗಾಂಧೀಜಿಯ ಜೀವನ ಚರಿತ್ರೆ ಛಾಯಾಚಿತ್ರ ಪ್ರದರ್ಶನ ವೀಕ್ಷಣೆ

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 150 ನೇ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ  ಬಿ.ಸಿ.ರೋಡಿನ ಮಿನಿವಿಧಾನ ಸೌಧದಲ್ಲಿ ಸೋಮವಾರದಿಂದ ಮೂರುದಿನಗಳ ಕಾಲಆಯೋಜಿಸಿರುವ ಗಾಂಧೀಜಿ ಯವರ ಜೀವನ ಚರಿತ್ರೆ ತಿಳಿಸುವ ಛಾಯಾಚಿತ್ರ ಪ್ರದರ್ಶನವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ವೀಕ್ಷಿಸಿದರು.

ಜಾಹೀರಾತು

ಗಾಂಧೀಜಿ ಅವರ ಬದುಕಿನ ಸಮಗ್ರ  ಮಾಹಿತಿಗಳನ್ನೊಳಗೊಂಡ ಅಪರೂಪದ  ಛಾಯಾಚಿತ್ರಗಳು ಇಲ್ಲಿದ್ದು. ಇವುಗಳನ್ನು  ವೀಕ್ಷಿಸಿ ಅವರ ಬದುಕಿನ ಸಾಧನೆಗಳ ಪರಿಚಯ ಮಾಡಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ  ಕಲ್ಪಿಸಿರುವುವುದು ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯ ಶ್ಲಾಘನೀಯವಾಗಿದ್ದು,ಸಾರ್ವಜನಿಕರು, ವಿಶೇಷವಾಗಿ ವಿದ್ಯಾರ್ಥಿ ಗಳು ಇದರ ಸದುಪಯೋಗ ಪಡೆಯುವಂತೆ ಕರೆ ನೀಡಿದರು.  ಶಾಸಕ ರಾಜೇಶ್ ನಾಯ್ಕ್ ಅವರ  ಭೇಟಿಯ ವೇಳೆ  ತಹಸೀಲ್ದಾರ್ ರಶ್ಮಿ ಎಸ್. ಆರ್. , ತಾಪಂ ಸದಸ್ಯ ಪ್ರಭಾಕರ ಪ್ರಭು, ರಾಯಿ ಪಂ.ಸದಸ್ಯ ಹರೀಶ್ ಆಚಾರ್ಯ,ಪುರುಷೋತ್ತಮ ಶೆಟ್ಟಿ,ರಮಾನಾಥ ರಾಯಿ ಮೊದಲಾದವರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.