ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ವಾರ್ತಾ ಇಲಾಖೆ ಆಯೋಜಿಸಿರುವ ಗಾಂಧೀಜಿ 150 ಛಾಯಾಚಿತ್ರ ಪ್ರದರ್ಶನವನ್ನು ಮಾಜಿ ಸಚಿವ ಬಿ.ರಮಾನಾಥ ರೈ ವೀಕ್ಷಿಸಿದರು. ಈ ಸಂದರ್ಭ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಪ್ರಮುಖರಾದ ಬೇಬಿ ಕುಂದರ್, ಜಯಂತಿ ಪೂಜಾರಿ, ಫಾರೂಕ್ ಉಳ್ಳಾಲ್ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಈ ಸಂದರ್ಭ ಮಾತನಾಡಿದ ರೈ, ಮಹಾತ್ಮಾ ಗಾಂಧೀಜಿ ಅವರ ಜೀವನ ಸಾಧನೆ ಜೊತೆಗೆ ಅವರ ದೇಹಾಂತ್ಯ ಹೇಗಾಯಿತು ಎಂಬ ವಿವರಗಳನ್ನು ತಿಳಿಸಿದೇ ಇದ್ದರೆ ಅಪೂರ್ಣವಾಗುತ್ತದೆ. ಗಾಂಧೀಜಿ ಅವರ ಕುರಿತು ಸಂಪೂರ್ಣ ವಿವರಗಳನ್ನು ತಿಳಿಸುವ ಕಾರ್ಯ ಆಗಬೇಕು ಎಂದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗಾಂಧೀಜಿ ಛಾಯಾಚಿತ್ರ ಪ್ರದರ್ಶನ ವೀಕ್ಷಿಸಿದ ಮಾಜಿ ಸಚಿವ ರೈ"