ಕಲ್ಲಡ್ಕ

ನ.30ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಬೃಹತ್ ಉದ್ಯೋಗ ಮೇಳ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶ್ರೀರಾಮ ಪದವಿ ಕಾಲೇಜು ದಶಮಾನೋತ್ಸವ ಹಿನ್ನೆಲೆಯಲ್ಲಿ ಲಯನ್ಸ್ ಕ್ಲಬ್ ಬಂಟ್ವಾಳ, ಎಂ.ಆರ್.ಪಿ.ಎಲ್. ಮಂಗಳೂರು, ಮಹಿಮಾ ಫೌಂಡೇಶನ್ ರಿ. ಬಂಟ್ವಾಳ ಆಶ್ರಯದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಯುವ ಉದ್ಯೋಗಾಕಾಂಕ್ಷಿಗಳ ಸೇವಾ ಕೇಂದ್ರ ಸಹಯೋಗದೊಂದಿಗೆ ಬೃಹತ್ ಉದ್ಯೋಗ ಮೇಳ ನವೆಂಬರ್ 30ರಂದು ನಡೆಯಲಿದೆ.

ಜಾಹೀರಾತು

ಉದ್ಯೋಗ ಮೇಳದಲ್ಲಿ ಸುಮಾರು 30ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿದ್ದು, 1500 ಉದ್ಯೋಗಾಕಾಂಕ್ಷಿಗಳು ಭಾಗವಹಿಸಲಿದ್ದಾರೆ. ಎಸ್.ಎಸ್.ಎಲ್.ಸಿ, ಐಟಿಐ, ಪದವಿ ಪಡೆದ ವಿದ್ಯಾರ್ಥಿಗಳಿಗೆ ಇದು ಅನುಕೂಲವಾಗಲಿದೆ ಎಂದು ವಿವೇಕಾನಂದ ವಿದ್ಯಾಕೇಂದ್ರದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಉದ್ಯೋಗ ಮೇಳಕ್ಕೆ ಸ್ಥಳದಲ್ಲೇ ನೋಂದಾವಣಿ ಮಾಡಬಹುದು. ಬೆಳಗ್ಗೆ 9 ಗಂಟೆಗೆ ನೋಂದಾವಣಿ ಪ್ರಕ್ರಿಯೆ ಆರಂಭಗೊಳ್ಳುತ್ತದೆ. ಸಂಜೆ 4.30ರವರೆಗೆ ಮೇಳ ಇರುತ್ತದೆ. ನೋಂದಾವಣಿ ಪ್ರಕ್ರಿಯೆ ಸಂದರ್ಭ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಪದವಿ ವಿದ್ಯಾರ್ಹತೆ ಇರುವವರಿಗೆ ಆದ್ಯತೆ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ಬಯೋಡಾಟಾ, ಆಧಾರ್ ಕಾರ್ಡ್ ಇತ್ಯಾದಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದು ಎಂದವರು ಮಾಹಿತಿ ನೀಡಿದರು.

ಐಟಿ ಮತ್ತಿತರ ಉದ್ಯೋಗಗಳನ್ನರಸುವವರಿಗೆ, ಬಿಇಯಂಥ ಪದವಿ ಪಡೆದವರಿಗೆ ಉದ್ಯೋಗಾವಕಾಶಗಳಿರುತ್ತವೆ. ಆದರೆ ಜನರ ನಡುವೆ ವೃತ್ತಿಕೌಶಲಗಳನ್ನು ನಿರ್ವಹಿಸುವವರಿಗೆ ಉದ್ಯೋಗದಾತರನ್ನು ಹುಡುಕುವ ಸಂಕಷ್ಟಗಳನ್ನು ಮನಗಂಡು ಈ ಮೇಳ ಆಯೋಜಿಸಲಾಗಿದೆ. ಇಲ್ಲಿ ಪ್ಲಂಬಿಂಗ್, ರೆಫ್ರಿಜರೇಶನ್ ಸಹಿತ ವೃತ್ತಿಕೌಶಲಕ್ಕೆ ಸಂಬಂಧಿಸಿದ ಉದ್ಯೋಗಗಳು, ಚಾಲಕವೃತ್ತಿ ಸಹಿತ ಹಲವು ವಿಭಾಗಗಳಿಗೆ ಉಪಯೋಗವಾಗುವಂಥ ವೃತ್ತಿಗೆ ಸೇರ್ಪಡೆಗೊಳ್ಳಲು ವೇದಿಕೆ ರಚಿಸಲಾಗಿದೆ. ಹಿಂದೆ ಉದ್ಯೋಗ ನೋಂದಣಿ ಕೇಂದ್ರಕ್ಕೆ ಅರ್ಜಿ ಹಾಕಿ ಉದ್ಯೋಗಕ್ಕೆ ಕಾಯಬೇಕಿತ್ತು, ಆದರೆ ಈಗ ಹಳ್ಳಿ ಪ್ರದೇಶಗಳಿಗೇ ಕೇಂದ್ರ ಗಳು ಬರುತ್ತಿರುವುದು ಉತ್ತಮ ಬೆಳವಣಿಗೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

ಲಯನ್ಸ್ 317 ಡಿ ಉಪರಾಜ್ಯಪಾಲ ವಸಂತಕುಮಾರ್ ಶೆಟ್ಟಿ, ಮಹಿಮಾ ಫೌಂಡೇಶನ್ ನ ಅಧ್ಯಕ್ಷ ಜಗದೀಶ್.ಬಿ., ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ದಯಾನಂದ, ಶ್ರೀರಾಮ ಪದವಿ ಕಾಲೇಜಿನ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ ಕಟ್ಟೆ, ಲಯನ್ ಪೂರ್ವಾಧ್ಯಕ್ಷರಾದ ಲಕ್ಷ್ಮಣ್ ಕುಲಾಲ್ ಅಗ್ರಬೈಲ್,ದಾಮೋದರ ಬಿ.ಎಂ.,ಉಮೇಶ್ ಆಚಾರ್ಯ ಉಪಸ್ಥಿತರಿದ್ದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts