ಲೋಕಾಯುಕ್ತ ಅಧಿಕಾರಿಗಳ ಪ್ರವಾಸ: ದೂರು ಅರ್ಜಿ ಸ್ವೀಕಾರ

ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

ಜಾಹೀರಾತು

ನವೆಂಬರ್ 25 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1  ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ,  ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿ. ನವೆಂಬರ್  26 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ಗ್ರಾಮ ಪಂಚಾಯತ್ ಕಚೇರಿ, ನವೆಂಬರ್ 27 ರಂದು  ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ  ಬೆಳ್ತಂಗಡಿ ತಾಲೂಕು ಕಚೇರಿ, ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಂಟ್ವಾಳ ತಾಲೂಕು ಕಚೇರಿ, ನವೆಂಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ತಹಶೀಲ್ದಾರರ ಕಚೇರಿ ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಂಗಳೂರು ತಹಶೀಲ್ದಾರರ ಕಚೇರಿ. ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅನಾಮಧೇಯ ಅರ್ಜಿಗಳು ಬಂದಲ್ಲಿ  ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಅರ್ಜಿದಾರರು ನಮೂನೆ I & IIರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಚೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : ಪೊಲೀಸ್ ಅಧೀಕ್ಷಕರ ಕಚೇರಿ -0824- 2429197,  9886542369, ಪೊಲೀಸ್ ಉಪಾಧೀಕ್ಷಕರ-1 ಕಚೇರಿ-0824-2453420, 8861688100, 9448530051, ಪೊಲೀಸ್ ಉಪಾಧೀಕ್ಷಕರ-2 ಕಚೇರಿ- 0824-2453420, 7026994128,  ಪೊಲೀಸ್ ನಿರೀಕ್ಷಕರ ಕಚೇರಿ- 0824-2427237, 9449044377 ನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಲೋಕಾಯುಕ್ತ ಅಧಿಕಾರಿಗಳ ಪ್ರವಾಸ: ದೂರು ಅರ್ಜಿ ಸ್ವೀಕಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*