ಅಡ್ಯಾರ್ ಗಾರ್ಡನ್ ನಲ್ಲಿ ನ.16,17ರಂದು ರೋಟರಿ ಫೌಂಡೇಶನ್ ಸೆಮಿನಾರ್ 2019 – ನಿಧಿ

ಬಂಟ್ವಾಳ ರೋಟರಿ ಕ್ಲಬ್ ಆಶ್ರಯದಲ್ಲಿ ನಾಲ್ಕು ಕಂದಾಯ ಜಿಲ್ಲೆಗಳನ್ನೊಳಗೊಂಡ ರೋಟರಿ ಜಿಲ್ಲೆ 3181ರ ರೋಟರಿ ಫೌಂಡೇಶನ್ ಸೆಮಿನಾರ್ ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನ.16 ಮತ್ತು 17ರಂದು ನಡೆಯಲಿದೆ.

ಜಾಹೀರಾತು

ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷೆ ಶಿವಾನಿ ಆರ್. ಬಾಳಿಗಾ ಗುರುವಾರ ಸಂಜೆ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

ರೋಟರಿ ಫೌಂಡೇಶನ್ ಟ್ರಸ್ಟೀ ಗುಲಾಮ್ ವಹನವತಿ ಕಾರ್ಯಕ್ರಮವನ್ನು ನ.16ರಂದು ಸಂಜೆ ಉದ್ಘಾಟಿಸಲಿದ್ದಾರೆ. ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ರೋಟರಿ ಜಿಲ್ಲೆ 3181ರ ಜಿಲ್ಲಾ ಗವರ್ನರ್ ಜೋಸೆಫ್ ಮ್ಯಾಥ್ಯೋ ವಹಿಸುವರು. ಗೌರವ ಅತಿಥಿಗಳಾಗಿ ಪಿಡಿಜಿ ಸೂರ್ಯಪ್ರಕಾಶ್ ಭಟ್, ಪಿಡಿಜಿಕೆ ಕೃಷ್ಣ ಶೆಟ್ಟಿ, ಡಿಜಿಇ ಎಂ.ರಂಗನಾಥ ಭಟ್, ಡಿಜಿಎನ್ ರವಿಂದ್ರ ಭಟ್ ಎ.ಆರ್. ಪಾಲ್ಗೊಳ್ಳಲಿದ್ದಾರೆ. ಸಂಜೆ 5ರಿಂದ ನೋಂದಣಿ ಕಾರ್ಯಗಳೊಂದಿಗೆ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ.

17ರಂದು ನಡೆಯುವ ಸೆಮಿನಾರ್ ಅಧ್ಯಕ್ಷತೆಯನ್ನು ರೋಟರಿ ಗವರ್ನರ್ ಜೋಸೆಫ್ ಮ್ಯಾಥ್ಯೂ ವಹಿಸುವರು. ಮುಖ್ಯ ಅತಿಥಿಗಳಾಗಿ ಅಂತಾರಾಷ್ಟ್ರೀಯ ನಿರ್ದೇಶಕರಾದ ಪಿಡಿಜಿ ಕಮಲ್ ಸಾಂಘ್ವಿ, ಅತಿಥಿಗಳಾಗಿ ಪಿಡಿಜಿ ಅವಿನಾಶ್ ಪೋತ್ದಾರ್, ಡಿಜಿಎಸ್.ಸಿ. ಎಸ್.ಕೆ.ಸಂಜಯ್ ಮತ್ತು ಡಿ.ಎಸ್.ಸಿ. ಪಿ.ಕೆ.ರಾಮಕೃಷ್ಣ ಭಾಗವಹಿಸಲಿದ್ದಾರೆ ಎಂದವರು ಮಾಹಿತಿ ನೀಡಿದರು.

ಜಾಹೀರಾತು

ರೋಟರಿಯ ಜಿಲ್ಲಾ ಟಿಆರ್ ಎಫ್ ಉಪಸಮಿತಿಯ ಚೇರ್ಮನ್ ಡಾ. ರಮೇಶಾನಂದ ಸೋಮಯಾಜಿ, ವಲಯ 4ರ ಸಹಾಯಕ ಗವರ್ನರ್ ರಿತೇಶ್ ಬಾಳಿಗಾ, ಜಿಲ್ಲಾ ಕಾರ್ಯದರ್ಶಿ ವಿವೇಕ್ ಅತ್ತಾವರ, ಕ್ಲಬ್ ಅಧ್ಯಕ್ಷೆ ಶಿವಾನಿ ಬಾಳಿಗ, ಸೆಮಿನಾರ್ ಚೇರ್ಮನ್ ಮಹಮ್ಮದ್ ಇಕ್ಬಾಲ್, ಸೆಮಿನಾರ್ ಕಾರ್ಯದರ್ಶಿ ಅಹಮದ್ ಮುಸ್ತಾಫಾ, ಕ್ಲಬ್ ಕಾರ್ಯದರ್ಶಿ ಸ್ಮಿತಾ ಸಲ್ದಾನ ಉಪಸ್ಥಿತರಿರುವರು.

ರೋಟರಿ ದತ್ತಿನಿಧಿ ಸಂಸ್ಥೆ ಶುದ್ಧ ಕುಡಿಯುವ ನೀರು ಒದಗಿಸುವುದು, ರೋಗಗಳನ್ನು ತಡೆಗಟ್ಟುವುದು, ಅನಕ್ಷರತೆ ಹೋಗಲಾಡಿಸುವುದು, ಆರ್ಥಿಕ ಪರಿಸ್ಥಿತಿ ಸುಧಾರಿಸಿ ಬಡತನ ನಿರ್ಮೂಲನೆಗೆ ನೆರವಾಗುವುದು, ತಾಯಿ ಮಕ್ಕಳ ರಕ್ಷಣೆ, ವಿಶ್ವಶಾಂತಿಯ ಗುರಿಯನ್ನು ಹೊಂದಿದೆ ಎಂದವರು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ರೋಟರಿ ಸಹಾಯಕ ಗವರ್ನರ್ ರಿತೇಶ್ ಬಾಳಿಗಾ, ಸೆಮಿನಾರ್ ಅಧ್ಯಕ್ಷ ಮಹಮ್ಮದ್ ಇಕ್ಬಾಲ್, ಸೆಮಿನಾರ್ ಕಾರ್ಯದರ್ಶಿ ಅಹಮದ್ ಮುಸ್ತಾಫಾ, ರಿಜಿಸ್ಟ್ರೇಶನ್ ಕಮಿಟಿ ಚೇರ್ಮನ್ ಕೆ.ನಾರಾಯಣ ಹೆಗ್ಡೆ, ಕ್ಲಬ್ ಕಾರ್ಯದರ್ಶಿ ಸ್ಮಿತಾ ಸಾಲ್ದಾನಾ ಉಪಸ್ಥಿತರಿದ್ದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. for advertisements contact: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಡ್ಯಾರ್ ಗಾರ್ಡನ್ ನಲ್ಲಿ ನ.16,17ರಂದು ರೋಟರಿ ಫೌಂಡೇಶನ್ ಸೆಮಿನಾರ್ 2019 – ನಿಧಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*