ಬಂಟ್ವಾಳ ತಾಲೂಕಿನ ತಲಪಾಡಿ ಸಮೀಪದ ನೇತ್ರಾವತಿ ನದಿಯಲ್ಲಿ ಮೃತದೇಹವೊಂದು ಭಾನುವಾರ ಪತ್ತೆಯಾಗಿದೆ. ಚಿಕ್ಕಮಗಳೂರಿನಲ್ಲಿ ಕಳೆದ ಸೋಮವಾರ ಬೆಂಗಳೂರಿಗೆ ಚಿನ್ನ ಖರೀದಿಗೆಂದು ತೆರಳಿದ್ದ ಅನಿಲ್ ಆಚಾರ್ಯ (37) ಅವರ ಮೃತದೇಹ ಇದು ಎಂದು ಬಂಧುಗಳು ಗುರುತಿಸಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು
ತುಂಬೆ ಡ್ಯಾಂ ಸಮೀಪದ ತಲಪಾಡಿಯ ನೇತ್ರಾವತಿ ನದಿಯಲ್ಲಿ ಕಾರ್ಯಾಚರಿಸುತ್ತಿರುವ ಮರಳು ಡ್ರೆಜ್ಜಿಂಗ್ ಯಂತ್ರದಲ್ಲಿ ಮೃತದೇಹ ಪತ್ತೆಯಾಯಿತು. ಇಲ್ಲಿನ ಕೆಲಸಗಾರರು ಭಾನುವಾರ ಬೆಳಿಗ್ಗೆ ಮರಳು ಡ್ರೆಜ್ಜಿಂಗ್ ಕಾರ್ಯದಲ್ಲಿ ತೊಡಗಿರುವಾಗ ಮಿಷನ್ ಸಮೀಪ ಮೃತದೇಹ ತೇಲುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಚಿಕ್ಕಮಗಳೂರಿನ ವ್ಯಕ್ತಿಯ ಮೃತದೇಹ ನೇತ್ರಾವತಿ ತೀರದಲ್ಲಿ ಪತ್ತೆ, ಪೊಲೀಸರಿಂದ ತನಿಖೆ"