ಕಲ್ಲಡ್ಕ

ಬಿಲ್ಲವ ಸಮಾಜಕ್ಕೆ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ: ರವಿಚಂದ್ರ ಕನ್ನಡಿಕಟ್ಟೆ

ಬ್ರಹ್ಮಶ್ರೀ ನಾರಾಯಣಗುರುವರ್ಯರ ತತ್ವಾದರ್ಶ ಒಳಗೊಂಡ ಸಂಪ್ರದಾಯಬದ್ಧ ಸಮಾಜ ಬಿಲ್ಲವ ಸಮಾಜ ಎಂದು ಖ್ಯಾತ ಯಕ್ಷಗಾನ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಹೇಳಿದ್ದಾರೆ.

ಜಾಹೀರಾತು

ಕಲ್ಲಡ್ಕದ ಬಿಲ್ಲವ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಕಲ್ಲಡ್ಕದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರುವರ್ಯರ ಜನ್ಮದಿನಾಚರಣೆ ಪ್ರಯುಕ್ತ ಗುರುಪೂಜೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಗೋಳ್ತಮಜಲು ,ಬಾಳ್ತಿಲ ,ವೀರಕಂಬ ,ಅಮ್ಟೂರು, ಬೋಳಂತೂರು, ಬೊಂಡಾಲ ಗ್ರಾಮಗಳ ಸೇರುವಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಆಪ್ತ ಸಹಾಯಕ ಜಗನ್ನಾಥ ಬಂಗೇರ, ಬಿಲ್ಲವ ಸಮಾಜದ ಯುವ ಬಾಂದವರು ಸಂಸ್ಕಾರಯುತವಾಗಿ ಜೀವನ ನಡೆಸಬೇಕೆಂದರು. ಕಲ್ಲಡ್ಕ ವಲಯ ಬಿಲ್ಲವ ಸಂಘದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ ಅಧ್ಯಕ್ಷತೆ ವಹಿಸಿದ್ದರು.

ಜಿಪಂ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ ,ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಸಂಘದ ಅಧ್ಯಕ್ಷ ಜಯಂತ ನಡುಬೈಲು, ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿ, ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜ ಶೇಖರ ಕೋಟ್ಯಾನ್, ಚಲನಚಿತ್ರ ನಟಿ ನವ್ಯ ಪೂಜಾರಿ, ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಪುಷ್ಪ ಸತೀಶ್, ಕಲ್ಲಡ್ಕ ಬಿಲ್ಲವ ಸಂಘದ ಉಪಾಧ್ಯಕ್ಷ ಅಣ್ಣು ಪೂಜಾರಿ ಬಿ ಕೆ, ಗ್ರಾಮ ಸಮಿತಿ ಅಧ್ಯಕ್ಷರಾದ ಮನೋಜ್ ಕಟ್ಟೆಮಾರ್, ರಾಜೇಶ್ ಸುವರ್ಣ ಕೃಷ್ಣಕೊಡಿ, ಯತಿನ್ ಕುಮಾರ್ ಬೊಂಡಾಲ, ರವಿ ಸುವರ್ಣಬೈಲು, ಜಯಪ್ರಕಾಶ್ ತಕ್ಕಿ ಪಾಪು, ಆನಂದ ಪೂಜಾರಿ ಪ್ರಭುಗಳಬೆಟ್ಟು ಉಪಸ್ಥಿತರಿದ್ದರು. ಚೆನ್ನಪ್ಪ ಕೋಟ್ಯಾನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ ಪೂಜಾರಿ ಹೊಸಕಟ್ಟ ಸ್ವಾಗತಿಸಿದರು. ವಸಂತ ಪೂಜಾರಿ ಬಟ್ಟಹಿತ್ತಿಲು ಧನ್ಯವಾದ ಸಮರ್ಪಿಸಿದರು. ದಿನೇಶ್ ಸುವರ್ಣ ಕೃಷ್ಣಕೋಡಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮಕ್ಕೆ ಮೊದಲು ಕೇಶವ ಶಾಂತಿ ನೇತೃತ್ವದಲ್ಲಿ ಗುರು ಪೂಜೆ ಹಾಗೂ ಶ್ರೀ ಶಾರದಾಂಬ ಭಜನ ಮಂದಿರ ಶೃಂಗಗಿರಿ ಗುಂಡಿಮಜಲು ಅವರಿಂದ ಭಜನಾ ಸಂಕೀರ್ತನೆ ನಡೆಯಿತು.

ಬಂಟ್ವಾಳನ್ಯೂಸ್, ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.