ಕಲ್ಲಡ್ಕ

ಮಾತೃಭಾಷೆಯಲ್ಲಿ ಕಲಿತವರೇ ಸಮರ್ಥರು – ಬಾಬಾ ರಾಮ್ ದೇವ್

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ, ಮಕ್ಕಳ ಕಾರ್ಯಚಟುವಟಿಕೆ ವೀಕ್ಷಣೆ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಯೋಗಗುರು ಬಾಬಾ ರಾಮ್ ದೇವ್ ಬುಧವಾರ ಮಧ್ಯಾಹ್ನ ಆಗಮಿಸಿ ಅಲ್ಲಿನ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ ಮಕ್ಕಳೊಂದಿಗೆ ಸಂವಾದ ನಡೆಸಿದರು.

ಜಾಹೀರಾತು

ಬಾಬಾ ರಾಮ್ ದೇವ್ ಮಕ್ಕಳ ಕಾರ್ಯಚಟುವಟಿಕೆ ವೀಕ್ಷಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಮಾತೃಭಾಷೆಯಲ್ಲಿ ಶಿಕ್ಷಣ ನೀಡುತ್ತಿರುವ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಪ್ರಮುಖ, ವಿವೇಕಾನಂದ ವಿದ್ಯಾಕೇಂದ್ರದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಅವರನ್ನು ಶ್ಲಾಘಿಸಿ, ಮಾತೃ ಭಾಷೆಯಲ್ಲಿ ಕಲಿಯುವುದರಿಂದ ಸಮರ್ಥರಾಗುತ್ತಾರೆ, ಜಗತ್ತನ್ನೇ ಗೆಲ್ಲುವ ಶಕ್ತಿ ದೊರಕುತ್ತದೆ ಧೈರ್ಯ ಸಾಹಸವನ್ನು ಜೀವನದಲ್ಲಿ ಬೆಳೆಸಿಕೊಂಡು ಶ್ರೇಷ್ಟ ಕಾರ್ಯಗಳನ್ನು ಮಾಡಿರಿ ಎಂದರು.

ಸರಸ್ವತಿ ವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಮ್ ದೇವ್.

ಗೋಪೂಜೆ, ವಿದ್ಯಾರ್ಥಿಗಳ ಮಲ್ಲಕಂಭ ಪ್ರದರ್ಶನ, ಶಿಶುಮಂದಿರ, ಪ್ರಾಥಮಿಕ ವಿಭಾಗ ವೀಕ್ಷಿಸಿದ ಅವರೊಂದಿಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್, ಸಂಚಾಲಕ ವಸಂತ ಮಾಧವ, ಸಹ ಸಂಚಾಲಕ ರಮೇಶ್ ಯನ್.  ಪತಂಜಲಿ ಯೋಗ ಟ್ರಸ್ಟ್‌ನ ರಾಜ್ಯ ಉಸ್ತುವಾರಿ ಭವರ್‌ಲಾಲ್ ಆರ್ಯ, ಮಂಗಳೂರು ಜಿಲ್ಲಾ ಉಸ್ತುವಾರಿ ರಾಘವೇಂದ್ರ ಆಚಾರ್ಯ ಉಡುಪಿ, ಸುಜಾತ ಮಂಗಳೂರು, ಡಾ| ಕಮಲಾ ಪ್ರ. ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕ್ಷಮಾ, ಜೆನಿತ್, ಅಮೃತ ವಿವಿಧ ಪ್ರಶ್ನೆಗಳನ್ನು ಮಾಡಿದರು. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ನಾರಾಯಣ ಸೋಮಯಾಜಿ ಫಲಪುಷ್ಪ ಸಮರ್ಪಿಸಿ ಸ್ವಾಗತಿಸಿದರು., ಪದವಿ ಕಾಲೇಜು ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.