ಬಂಟ್ವಾಳ

ಗ್ರಾಪಂ ನಿರ್ಣಯಗಳಿಗೆ ಸೂಕ್ತ ಸ್ಪಂದನೆ ಅಗತ್ಯ: ಪ್ರತಾಪ್ ಚಂದ್ರ ಶೆಟ್ಟಿ

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ದೃಷ್ಟಿಯಿಂದ ಗ್ರಾ.ಪಂ.ನಿರ್ಣಯಗಳಿಗೆ ಸ್ಪಂದನೆ ನೀಡುವ ಕಾರ್ಯವಾಗಬೇಕು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಪ್ರತಾಪ್ಚಂದ್ರ ಶೆಟ್ಟಿ ಹೇಳಿದರು.

ಜಾಹೀರಾತು

ಗುರುವಾರ ಸ್ಥಳೀಯ ಸಂಸ್ಥೆಗಳ ಭೇಟಿಯ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾ.ಪಂ.ಗೆ ಭೇಟಿ ನೀಡಿ ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರ ಜತೆ ಚರ್ಚೆ ನಡೆಸಿದರು.

ಈ ಸಂದರ್ಭ ಜನಪ್ರತಿನಿಧಿಗಳು, ಸಾರ್ವಜನಿಕರು ವಿವಿಧ ಅಹವಾಲುಗಳನ್ನು ಮಂಡಿಸಿದರು. ಮಾಜಿ ಸಚಿವ ಬಿ.ರಮಾನಾಥ ರೈ ಅವರು ಗ್ರಾ.ಪಂ.ಗಳಿಗೆ ಅನುದಾನ ಹೆಚ್ಚಳ, ಪಂಚಾಯತ್ಗಳಿಗೆ ಹೆಚ್ಚಿನ ಅಧಿಕಾರ ನೀಡುವ ಕುರಿತು ಪ್ರಸ್ತಾಪಿಸಿದರು. ಆಧಾರ್ ಕೇಂದ್ರವನ್ನು ಗ್ರಾ.ಪಂ.ನಲ್ಲೇ ಮರು ಆರಂಭಿಸುವಂತೆ ಗ್ರಾ.ಪಂ.ಉಪಾಧ್ಯಕ್ಷ ಲಕ್ಷ್ಮೀನಾರಾಯಣ ಗೌಡ ವಿನಂತಿಸಿದರು. ಸದಸ್ಯ ಸಂಜೀವ ಪೂಜಾರಿ, ಸುರೇಶ್ ಪೂಜಾರಿ ಮಾಜಿ ಅಧ್ಯಕ್ಷ ದೇವಪ್ಪ ಕುಲಾಲ್ ಮಾತನಾಡಿದರು. ಗ್ರಾ.ಪಂ.ಅಧ್ಯಕ್ಷೆ ಸುಮಿತ್ರಾ ಯೋಗೀಶ್ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಪ್ರಮುಖರಾದ ಬೇಬಿ ಕುಂದರ್ ವಿವಿಧ ಮನವಿಗಳನ್ನು  ಮುಂದಿಟ್ಟರು. ತಾ.ಪಂ.ಕಾರ್ಯನಿರ್ವಹಣಾಕಾರಿ ರಾಜಣ್ಣ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ವೇದಾ, ಗ್ರಾಮಕರಣಿಕ ಕುಮಾರ್ ವಿವಿಧ ಪ್ರಶ್ನೆಗಳಿಗೆ ಉತ್ತರಿಸಿದರು. ಸದಸ್ಯರಾದ ದಯಾನಂದ ಗೌಡ, ಹರೀಶ್ ಪೂಜಾರಿ, ಬಾಲಕೃಷ್ಣ ಪೂಜಾರಿ, ವಿಶ್ವನಾಥ ಶೆಟ್ಟಿ, ಪೂವಪ್ಪ ಮೆಂಡನ್, ಶಾಲಿನಿ ಶ್ರೀನಿವಾಸ್, ಶಾಲಿನಿ ಜಗದೀಶ್, ರೂಪಶ್ರೀ, ಶಶಿಕಲಾ, ಸುಮತಿ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ