ಕಲ್ಲಡ್ಕ

ಹಿರೀಸಾವೆ ಬಳಿ ಅಪಘಾತ, ಮಾಣಿಯ ಯುವಕ ಮೃತ್ಯುವಶ

ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ, 25ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಚನ್ನರಾಯಪಟ್ಟಣದ ಹಿರಿಸಾವೆ ಬಳಿ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ನಿವಾಸಿ ಉಗ್ಗಪ್ಪ ಮೂಲ್ಯ ಅವರ ಪುತ್ರ ಅಭಿಷೇಕ್ (28) ಸಾವನ್ನಪ್ಪಿದವರು.

ಜಾಹೀರಾತು

ಮಾಣಿ ನಿವಾಸಿ ಚಂದಪ್ಪ ಮೂಲ್ಯ ಅವರ ಮೊಮ್ಮಗನಾಗಿರುವ ಅಭಿಷೇಕ್, ಭಾನುವಾರ ರಾತ್ರಿ ಮಾಣಿಯಿಂದ ಬಸ್ ಹತ್ತಿದ್ದಾರೆ. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಯಾಗಿದ್ದ ಅವರು ವಿದ್ಯಾಭ್ಯಾಸ ಪೂರೈಸಿದ ಬಳಿಕ ಬೆಂಗಳೂರಿನಲ್ಲಿ ಖಾಸಗಿ ಬ್ಯಾಂಕ್ ಒಂದರಲ್ಲಿ ಉದ್ಯೋಗ ದೊರಕಿತ್ತು, ಕೆಲಸಕ್ಕೆಂದು ಸೇರಲು ಅವರು ಹೊರಟಿದ್ದರು. ಇತ್ತೀಚೆಗೆ ಅವರ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದ್ದು, ಸಂಬಂಧಿಯೊಬ್ಬರ ಮದುವೆ ಕಾರ್ಯಕ್ರಮಕ್ಕೆಂದು ಊರಿಗೆ ಬಂದಿದ್ದರು. ತಮ್ಮನೊಂದಿಗೆ ಮರಳಿ ಬೆಂಗಳೂರಿಗೆ ಪ್ರಯಾಣಿಸುವ ಸಂದರ್ಭ ಹಿರೀಸಾವೆ ಬಳಿ ಘಟನೆ ಸಂಭವಿಸಿದೆ. ಇವರ ತಮ್ಮನೂ ಗಾಯಾಳಾಗಿ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ