- ಮಂಗಳವಾರ ಸಂಜೆ 6.30ಕ್ಕೆ ನಡೆದ ಘಟನೆ
ಮಂಗಳವಾರ ಸಂಜೆ ಸುಮಾರು 6.30ಕ್ಕೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಬಕ ಕಲಂದಡ್ಕದಲ್ಲಿ ಇಲ್ಲಿನ ನಿವಾಸಿ ಅಬ್ದುಲ್ ಖಾದರ್ (35) ಎಂಬವರ ಮೇಲೆ ಪಿಸ್ತೂಲ್ ಮಾದರಿಯ ಯಾವುದೋ ಸಾಧನದಿಂದ ಗುಂಡು ಹಾರಿಸಲಾಗಿದೆ. ಅವರ ಎದೆಯ ಭಾಗಕ್ಕೆ ಗುಂಡು ತಗಲಿದ್ದು, ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಮನೆಯಿಂದ ಕಾರಿನಲ್ಲಿ ಕಬಕ ಪೇಟೆಗೆ ಧಾವಿಸಿ ಬಂದಿದ್ದು, ಅಲ್ಲಿಂದ ಸ್ಥಳೀಯರು ಗಾಯಾಳುವನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಜಾಹೀರಾತು
ಆರೋಪಿಗಳ ಪತ್ತೆಗೆ ಪುತ್ತೂರು ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಬಕದಲ್ಲಿ ಗುಂಡು ಹಾರಾಟ: ಆರೋಪಿಗಳ ತನಿಖೆಗೆ ವಿಶೇಷ ತಂಡ"