30ರಂದು ಕಕ್ಯಪದವಿನ ಮೈರಾದಲ್ಲಿ ಸತ್ಯ-ಧರ್ಮ ಜೋಡುಕರೆ ಕಂಬಳ

ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಮೈರಾದಲ್ಲಿರುವ ಶ್ರೀರಾಮಾಂಜನೇಯ ಗೆಳೆಯರ ಬಳಗ(ರಿ) ವತಿಯಿಂದ ಏಳನೇ ವರ್ಷದ ಸತ್ಯ, ಧರ್ಮ ಜೋಡುಕರೆ ಬಯಲು ಕಂಬಳ ನವೆಂಬರ್ 30ರಂದು ವೇ.ಮೂ. ರಾಘವೇಂದ್ರ ಭಟ್ ಕೊಡಂಬೆಟ್ಟು ಕಾರಿಂಜ ಆಶೀರ್ವಾದದೊಂದಿಗೆ ಕಕ್ಯಪದವಿನ ಮೈರಾ-ಬರ್ಕೆಜಾಲು ಎಂಬಲ್ಲಿ ನಡೆಯಲಿದೆ.

ಜಾಹೀರಾತು

ಕಂಬಳ ಸಮಿತಿಯ ಅಧ್ಯಕ್ಷ ರವಿ ಕಕ್ಯಪದವು ಸುಬ್ರಹ್ಮಣ್ಯ ಅವರು ಬಿ.ಸಿ.ರೋಡ್ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಗುಣಪಾಲ ಕಡಂಬ, ರಾಜೀವ ಶೆಟ್ಟಿ ಎಡ್ತೂರು ಮಾರ್ಗದರ್ಶನದೊಂದಿಗೆ ಪ್ರಮುಖರಾದ ತುಂಗಪ್ಪ ಬಂಗೇರ, ಸಂದೇಶ್ ಶೆಟ್ಟಿ, ರುದ್ರೇಶ್, ವರದರಾಜ ಗೌಡ, ಸತೀಶ್ ಶೆಟ್ಟಿ ಬೋಳದಗುತ್ತು, ಸಾಯಿ ಗಿರಿಧರ ಶೆಟ್ಟಿ, ಕುಸುಮಾಧರ ಉರ್ಕಿ, ಸತೀಶ್ ಪುತ್ರನ್ ಸಹಕಾರದೊಂದಿಗೆ ಗೌರವಾಧ್ಯಕ್ಷ ಉಳಿಪ್ಪಾಡಿಗುತ್ತು ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಜಿಲ್ಲಾ ಕಂಬಳ ಸಮಿತಿ ಸಹಕಾರದೊಂದಿಗೆ ಲತೀಶ್ ಕುಕ್ಕಾಜೆ ಕಾರ್ಯಾಧ್ಯಕ್ಷತೆಯಲ್ಲಿ ಕಂಬಳ ನಡೆಯಲಿದೆ. ಪ್ರಗತಿಪರ ಕೃಷಿಕ ರವೀಂದ್ರ ಅಡಪ ಬೆಳಗ್ಗೆ 9 ಗಂಟೆಗೆ ಉದ್ಘಾಟಿಸಲಿದ್ದು, ಸಭಾ ಕಾರ್ಯಕ್ರಮವನ್ನು ಸುರೇಶ್ ಶೆಟ್ಟಿ ಮಿಯಾರು ಉದ್ಘಾಟಿಸುವರು. ಸುಮಾರು 150 ಜೋಡಿ ಕೋಣಗಳು ಕಂಬಳದಲ್ಲಿ ಪಾಲ್ಗೊಳ್ಳಲಿದ್ದು, ಬೆಳಗ್ಗೆ 9 ಗಂಟೆಗೆ ನೇಗಿಲು ಕಿರಿಯ, ಮಧ್ಯಾಹ್ನ 12ಕ್ಕೆ ಹಗ್ಗ ಹಿರಿಯ, 2ಕ್ಕೆ ನೇಗಿಲು ಹಿರಿಯ ಮತ್ತು ಅಡ್ಡಹಲಗೆ ಹಾಗೂ ಸಂಜೆ 4ಕ್ಕೆ ಹಗ್ಗ ಹಿರಿಯ ಮತ್ತು ಕನೆಹಲಗೆ ಕಂಬಳ ನಡೆಯಲಿದೆ. ಸುಪ್ರೀಂ ಕೋರ್ಟಿನ ದ್ವಿಸದಸ್ಯ ಪೀಠದಲ್ಲಿ ಕಂಬಳ ಕೇಸ್ ನ ಪ್ರಕ್ರಿಯೆಗಳು ವಿಚಾರಣಾ ಹಂತದಲ್ಲಿರುವ ಹಿನ್ನೆಲೆಯಲ್ಲಿ ಕಂಬಳ ಆಚರಣೆ ಬಗ್ಗೆ ರಾಜ್ಯ ಸರಕಾರ ರೂಪಿಸಿದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು. ಕಂಬಳ ಸಮಿತಿ ತೀರ್ಮಾನವೇ ಅಂತಿಮ ಎಂದು ಅವರು ಹೇಳಿದರು.

ಈ ಸಂದರ್ಭ ವಿಜಯ ಕರ್ನಾಟಕ ನವತಾರೆ ದ್ವಿತೀಯ ರನ್ನರ್ ಹಾಗೂ ಮಿಸ್ ಕರ್ನಾಟಕ ಇಂಟರ್ ನ್ಯಾಶನಲ್ ಪ್ರಥಮ ರನ್ನರ್ ಕಾವ್ಯ ಅಂಚನ್, ಮಿಸಸ್ ಮಂಗಳೂರು ವಿಜೇತೆ ಸುಧೀಕ್ಷಾ ಕಿರಣ್, ಕಾಮಿಡಿ ಕಿಲಾಡಿ ಖ್ಯಾತಿಯ ಅನೀಶ್ ಅಮೀನ್ ವೇಣೂರು, ಕನಸು ಮಾರಾಟಕ್ಕಿದೆ ಚಿತ್ರತಂಡ ವಿಶೇಷ ಆಕರ್ಷಣೆಯಾಗಿ ಭಾಗವಹಿಸಲಿದ್ದು, ಚಂದ್ರಶೇಖರ್ ಕಕ್ಯಪದವು ಸಹಕಾರದೊಂದಿಗೆ ಗೊಂಬೆ ನೃತ್ಯ ವೈಭವ ನಡೆಯಲಿದೆ ಎಂದರು.

ಜಾಹೀರಾತು

ಸನ್ಮಾನ, ಸಂಸ್ಮರಣೆ: ಅಶ್ವತ್ ಹೆಗ್ಡೆ ಬಳಂಜ ಅವರಿಗೆ ತುಳುನಾಡ ಮುತ್ತು ಪ್ರಶಸ್ತಿ ಪ್ರದಾನ, ಕೋಣದ ಯಜಮಾನ ಇರುವೈಲು ಪಾಣಿಲ ಬಾಡು ಪೂಜಾರಿ, ನೇಮು ನಾಯ್ಕ ಅವರನ್ನು ಸನ್ಮಾನಿಸಲಾಗುವುದು. ಕಂಬಳ ಕ್ಷೇತ್ರದಲ್ಲಿ ಮಿಂಚಿ ಮರೆಯಾದವರ ಸನ್ಮಾನ ನಡೆಯಲಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಿ.ಟಿ.ರವಿ, ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತಿತರರು ಭಾಗವಹಿಸುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಲತೀಶ್ ಕುಕ್ಕಾಜೆ, ಪ್ರಧಾನ ಕಾರ್ಯದರ್ಶಿ ರಂಜಿತ್ ಮೈರ, ಪ್ರಮುಖರಾದ ಸುದರ್ಶನ ಬಜ, ವಸಂತ ರಾಮನಗರ ಮತ್ತಿತರರು ಉಪಸ್ಥಿತರಿದ್ದರು.

www.bantwalnews.com Editor: Harish Mambady

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "30ರಂದು ಕಕ್ಯಪದವಿನ ಮೈರಾದಲ್ಲಿ ಸತ್ಯ-ಧರ್ಮ ಜೋಡುಕರೆ ಕಂಬಳ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*