- ಗ್ರಾಪಂ ಸದಸ್ಯ ಯೋಗೀಶ್ ಪ್ರಭು, ಅವರ ಪತ್ನಿ ಶೋಭಾ ಗಾಯಗೊಂಡವರು
ಮೇರೆಮಜಲು ಎಂಬಲ್ಲಿ ಶುಕ್ರವಾರ ಬೆಳಗ್ಗೆ ಸುಮಾರು 4 ಗಂಟೆ ವೇಳೆಗೆ ಮನೆಯೊಂದಕ್ಕೆ ನುಗ್ಗಿದ ತಂಡ, ಗ್ರಾಪಂ ಸದಸ್ಯ ಯೋಗೀಶ್ ಪ್ರಭು ಮತ್ತು ಅವರ ಪತ್ನಿ ಅವರ ಮೇಲೆ ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿದೆ.
ಜಾಹೀರಾತು
ಗಂಭೀರ ಗಾಯಗೊಂಡ ಇಬ್ಬರನ್ನೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆರೋಪಿಗಳು ಪ್ರಭು ಅವರ ಮನೆಗೆ ಬಂದು ಬಾಗಿಲು ಬಡಿದು ಎಚ್ಚರಿಸಿ ಬಾಗಿಲು ತೆರೆಯುವಂತೆ ಹೇಳಿದ್ದು, ಬಾಗಿಲು ತೆರೆಯುತ್ತಿದ್ದಂತೆ ಮನೆಯೊಳಗೆ ನುಗ್ಗಿ ಏಕಾಏಕಿ ತಲವಾರಿನಿಂದ ದಾಳಿ ಮಾಡಿದ್ದಾಗಿ ಆರೋಪಿಸಲಾಗಿದೆ.
ಜಾಹೀರಾತು
ಬಂಟ್ವಾಳ ಎಎಸ್.ಪಿ.ಸೈದುಲು ಅಡಾವತ್, ವೃತ್ತ ನಿರೀಕ್ಷಕ ಟಿ. ಡಿ.ನಾಗರಾಜ್, ಗ್ರಾಮಾಂತರ ಎಸ್.ಐ.ಪ್ರಸನ್ನ ಹಾಗೂ ಸಿಬ್ಬಂದಿ ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದು, ಪರಾರಿಯಾಗಿರುವ ಆರೋಪಿಗಳ ಶೀಘ್ರ ಪತ್ತೆ ಹಚ್ಚಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೇರೆಮಜಲು: ಮನೆಗೆ ನುಗ್ಗಿ ಮಾರಕಾಯುಧದಿಂದ ಮಾರಣಾಂತಿಕ ಹಲ್ಲೆ"