ಪುಂಜಾಲಕಟ್ಟೆ

ಕಕ್ಯಪದವು ಮೈರ ಬರ್ಕೆಜಾಲುವಿನಲ್ಲಿ ಸತ್ಯ-ಧರ್ಮ ಕಂಬಳ

ಸತ್ಯಧರ್ಮ ಜೋಡುಕರೆ ಕಂಬಳ, ಉಳಿ, ಕಕ್ಯಪದವು. – ಚಿತ್ರ: ಕಿಶೋರ್ ಪೆರಾಜೆ

 

ಬಂಟ್ವಾಳ ತಾಲೂಕಿನ ಉಳಿ ಗ್ರಾಮದ  ಕಕ್ಯಪದವಿನ ಮೈರ ಬರ್ಕೆಜಾಲುನಲ್ಲಿ  ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಏಳನೇ ವರ್ಷದ ಸತ್ಯಧರ್ಮ ಜೋಡುಕರೆ ಬಯಲು ಕಂಬಳ ಶನಿವಾರ ನಡೆಯಿತು.

ಜಾಹೀರಾತು

ಪ್ರಗತಿಪರ ಕೃಷಿಕ ರವೀಂದ್ರ ಅಡಪ ದಿಡಿಂಬಿಲ ಅವರು ಕಂಬಳದ ಕರೆಯನ್ನು  ಉದ್ಘಾಟಿಸಿ ಕಂಬಳಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ಹಾಗೂ ಕಂಬಳ ಕೋಣಗಳ ಯಜಮಾನ ಸುರೇಶ್ ಶೆಟ್ಟಿ ಮಿಯ್ಯಾರು ಉದ್ಘಾಟಿಸಿದರು. ಉಪ್ಪಿನಂಗಡಿ ದಂತ ವೈದ್ಯ ಡಾ.ರಾಜಾರಾಂ ಅಧ್ಯಕ್ಷತೆ ವಹಿಸಿದ್ದರು.

ಉದ್ಘಾಟನೆ

ಸತ್ಯ ಧರ್ಮ ಕಂಬಳ ಸಮಿತಿ ಅಧ್ಯಕ್ಷ ರವಿ ಕಕ್ಯಪದವು, ಕಂಬಳ ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ, ಸತ್ಯ ಧರ್ಮ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಲತೀಶ್ ಕುಕ್ಕಾಜೆ, ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಅಧ್ಯಕ್ಷ  ಮಹೇಂದ್ರ ಕಾಯರ್ಗುರಿ, ಕೋಶಾಧಿಕಾರಿ ಉಮೇಶ್ ಪೂಜಾರಿ, ಗೆಳೆಯರ ಬಳಗದ ಪದಾಧಿಕಾರಿಗಳಾದ ನ್ಯಾಯವಾದಿ ರಂಜಿತ್ ಮೈರ, ಪುರುಷೋತ್ತಮ ಪಲ್ಕೆ, ಕುಸುಮಾಧರ ಉರ್ಕಿ, ಪ್ರಮುಖರಾದ ಚಿದಾನಂದ ರೈ, ಗಂಗಾಧರ ಪೂಜಾರಿ ಕಜೆಕಾರು, ಪ್ರವೀಣ್ ಶೆಟ್ಟಿ  ಕಿಂಜಾಲು, ಸುಧಾಕರ ಶೆಟ್ಟಿ ಶಂಕರಬೆಟ್ಟು, ಪ್ರದೀಪ್, ದಿನೇಶ್ ಪೂಜಾರಿ ಕುಕ್ಕಾಜೆ, ಶಿವಪ್ಪ ಪೂಜಾರಿ ಜೇಡರಬೆಟ್ಟು, ಸುಂದರ ಪೂಜಾರಿ ಕೊಲೆಂಜಿರಕೊಡಿ, ಜಯ ಪೂಜಾರಿ ಕುಕ್ಕಾಜೆ, ಮಹಮ್ಮದ್, ಯೋಗೀಶ್ ಪೂಜಾರಿ, ರಫೀಕ್ ಬನತ್ತಪಲ್ಕೆ, ಶಾಂತಪ್ಪ ಪೂಜಾರಿ ಹಟದಡ್ಕ, ದಯಾನಂದ ಮುಂಡ್ರೇಲು, ಲಿಂಗಪ್ಪ ಗೌಡ ಮಹಮ್ಮಾಯಿ, ಪ್ರಶಾಂತ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.  ಗೆಳೆಯರ ಬಳಗದ ಸ್ಥಾಪಕಾಧ್ಯಕ್ಷ ಶಿವಾನಂದ ಮೈರ ಸ್ವಾಗತಿಸಿದರು. ಪ್ರಶಾಂತ ಮೈರ ಕಾರ್ಯಕ್ರಮ ನಿರೂಪಿಸಿದರು. ಉದ್ಘಾಟನೆಗೆ ಮುನ್ನ ಮೈರ ಶ್ರೀ ರಾಮಾಂಜನೇಯ ಭಜನ ಮಂದಿರದಿಂದ ಬರ್ಕೆಜಾಲು ವರೆಗೆ ಮೆರವಣಿಗೆ ನಡೆಯಿತು.

ಸಚಿವ ಕೋಟ ಭೇಟಿ, ಸನ್ಮಾನ:

ಸಂಜೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತಿತರರು ಭೇಟಿ ನೀಡಿದರು. ಈ ಸಂದರ್ಭ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಬಂಟ್ವಾಳನ್ಯೂಸ್  ಸಂಪಾದಕ: ಹರೀಶ ಮಾಂಬಾಡಿ ಸುದ್ದಿ ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.