ಪ್ರಮುಖ ಸುದ್ದಿಗಳು

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ -ಅಧ್ಯಕ್ಷ ಕಿನಿಲ ಅಶೋಕ, ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ

ಪುತ್ತೂರು: ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ (ರಿ) ಪುತ್ತೂರು ಇದರ ನೂತನ ಅಧ್ಯಕ್ಷರಾಗಿ ಕೋಡಪದವಿನ ಕಿನಿಲ ಅಶೋಕ್, ಕಾರ್ಯದರ್ಶಿಯಾಗಿ ಗುತ್ತಿಗಾರು ಕಮಿಲದ ಕೃಷಿಕ, ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಮತ್ತು ಉಪಾಧ್ಯಕ್ಷರಾಗಿ ಕುಕ್ಕುಜಡ್ಕದ ಎಂ.ಜಿ.ಸತ್ಯನಾರಾಯಣ, ಕೆ.ವಿಶ್ವನಾಥ ರಾವ್ ಸುಳ್ಯ ಇವರು ಆಯ್ಕೆಯಾಗಿದ್ದಾರೆ.

ಜಾಹೀರಾತು

Kinila_Ashok

ಡಿ.೩೦ ರಂದು ಪುತ್ತೂರು ತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದಚುಂಚಶ್ರೀ ಸಭಾಭವನದಲ್ಲಿ ಜರುಗಿದ ಸಂಘದ ಮಹಾಸಭೆಯಲ್ಲಿ ಕಾರ್ಯಕಾರಿ ಸಮಿತಿ ರಚಿಸಿ ಪದಾಧಿಕಾರಿಗಳನ್ನು ಘೋಷಿಸಲಾಯಿತು.

Mahesh_Puchchappady

ಸಂಘದ ಅಧ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಸಂಘದ ಕಾರ್ಯದರ್ಶಿ ಕಿನಿಲ ಅಶೋಕ್ ವರದಿ, ಲೆಕ್ಕಪತ್ರಗಳನ್ನು ಮಂಡಿಸಿದರು. ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಉಪಾಧ್ಯಕ್ಷ ಶಂ.ನಾ.ಖಂಡಿಗೆ ಆಗಮಿಸಿ ಶುಭಕೋರಿದರು. ಕ್ಯಾಂಪ್ಕೋದ ಮಾಜಿ ಅಧ್ಯಕ್ಷ ಕೊಂಕೋಡಿ ಪದ್ಮನಾಭ, .ಆರ್.ಡಿ.ಎಫ್. ಕಾರ್ಯನಿರ್ವಹಣಾಧಿಕಾರಿ ಡಾ.ಕೇಶವ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಸಂಘಕ್ಕೆ ಯುವ ಕೃಷಿಕರು ಬರುವಂತಾಗಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ರೂಪುಗೊಂಡ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವನ್ನು ಹೊಸ ತಲೆಮಾರು ಇನ್ನಷ್ಟು ಸುದೃಢವಾಗಿ ಕಟ್ಟಿಬೆಳೆಸಬೇಕಾಗಿದೆ.” ಎಂದು ಮಂಚಿ ಶ್ರೀನಿವಾಸ ಆಚಾರ್ ಅಭಿಪ್ರಾಯಪಟ್ಟರು.

ಜಾಹೀರಾತು

ಕಿನಿಲ ಅಶೋಕ ಸ್ವಾಗತಿಸಿದರು. ಹಿರಿಯ ಸದಸ್ಯ ವಿ..ಭಟ್ ಅಡ್ಯನಡ್ಕ ಪ್ರಾರ್ಥಿಸಿದರು. ನೂತನ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ