ಬಂಟ್ವಾಳ

ಶ್ರೀ ಸುಬ್ರಾಯ ನಾವೂರೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ : ತಾಲೂಕಿನ ನಾವೂರು  ಶ್ರೀ ಸುಬ್ರಾಯ ನಾವೂರೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವವು‌ 2020 ಜ. 11-19ರವರೆಗೆ ನಡೆಯಲಿದ್ದು,ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯ ಸರಳ ಸಮಾರಂಭ  ದೇವಸ್ಥಾನದ ವಠಾರದಲ್ಲಿ ನಡೆಯಿತು. 

ಜಾಹೀರಾತು

 ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಆಮಂತ್ರಣ ಪತ್ರಿಕೆ”ಯನ್ನು ಬಿಡುಗಡೆಗೈದು ಮಾತನಾಡಿ,ದೇವಳದ ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರಲ್ಲದೆ ಗ್ರಾಮಸ್ಥರ,ಊರ ಪರವೂರಿನ ಭಕ್ತ ಜನರ ಸಹಕಾರವನ್ನು ಯಾಚಿಸಿದರು.

ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ  ಹರಿಕೃಷ್ಣ ಬಂಟ್ವಾಳ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ  ರಾಮಚಂದ್ರ ಭಟ್, ಸದಸ್ಯರಾದ ಪೂರ್ಣಿಮಾ, ಅರ್ಚಕ  ವೆಂಕಟದಾಸ ಭಟ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಮುರಳೀಧರ ಭಟ್,    ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ.,ರಾಮಚಂದ್ರ ಗೌಡ ಮಣಿ,ಜಿಪಂ ಸದಸ್ಯ ಪದ್ಮಶೇಖರ ಜೈನ್, ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಯ ಪ್ರ.ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ  ಸದಾನಂದಗೌಡ ಸ್ವಾಗತಿಸಿ, ವಂದಿಸಿದರು. 

ಸಚಿವರ ಭೇಟಿ: ಇದೇ ಸಂದರ್ಭ ಕಂಬಳಕೂಟಕ್ಕೆ ತೆರಳುತ್ತಿದ್ದ ರಾಜ್ಯ ಮುಜರಾಯಿ ಸಚಿವ,ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ದೇವಸ್ಥಾನಕ್ಕೆ ಭೇಟಿ ನೀಡಿ ದೇವಳದ ಜೀರ್ಣೋದ್ದಾರ ಕಾರ್ಯದ ಕಾಮಗಾರಿಯನ್ನು ವೀಕ್ಷಿಸಿದರು.ದೇವಳದ ಅಭಿವೃದ್ದಿ ಕಾರ್ಯಕ್ಕೆ ಮುಜರಾಯಿ ಇಲಾಖೆಯಿಂದ ಎರಡು ಲಕ್ಷ ರೂ.ಅನುದಾನ ಮಂಜೂರುಗೊಳಿಸುವ ಭರವಸೆಯನ್ನು ಸಚಿವರು ನೀಡಿದರು.ಶಾಸಕ ರಾಜೇಶ್ ನಾಯ್ಕ್,ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ  ಹರಿಕೃಷ್ಣ ಬಂಟ್ವಾಳ ಹಾಗೂ ದೇವಳದ ಪದಾಧಿಕಾರಿಗಳು ಸಚಿವರನ್ನು ಸ್ವಾಗತಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ