ರಾಜ್ಯಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟ್: ಕಲ್ಲಡ್ಕ ವಿದ್ಯಾರ್ಥಿಗಳ ಸಾಧನೆ

ಪುತ್ತೂರು ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದಅನ್ವೇಷಣಾ೨೦೧೯ ರಾಜ್ಯ ಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟನಲ್ಲಿ ಶ್ರೀರಾಮ ಪ್ರೌಢ ಶಾಲೆಯಿಂದ 24, ಶ್ರೀರಾಮ ಪ್ರಾಥಮಿಕ ವಿಭಾಗದಿಂದ 17 ಹಾಗೂ ಪಿ.ಯು.ಸಿ ವಿಭಾಗದಿಂದ 6 ವಿದ್ಯಾರ್ಥಿಗಳು ಒಟ್ಟು 28 ಮಾದರಿಗಳನ್ನು ವಿವಿಧ ವಿಭಾಗಗಳಲ್ಲಿ ಪ್ರದರ್ಶಿಸಿ ಗಮನ ಸೆಳೆದಿದ್ದಾರೆ.

ರಂಜಿತ್

ಹೊಸ ಬಗೆಯ ಕೃಷಿ ಯಂತ್ರೋಪಕರಣಗಳಲ್ಲಿ ಪಶುಸಂಗೋಪನೆಗೆ ಸಹಾಯವಾಗುವ ದನಗಳಿಗೆ ಹಸಿ ಹುಲ್ಲನ್ನು ಕೆತ್ತುವ ಯಂತ್ರದ ಮಾದರಿಯನ್ನು ತಯಾರಿಸಿ ಜೂನಿಯರ್ ವಿಭಾಗದಲ್ಲಿ ೯ನೇ ತರಗತಿಯ ರಂಜಿತ್ ಮತ್ತು ಸಬ್ ಜೂನಿಯರ್ ವಿಭಾಗದಲ್ಲಿ ೭ನೇ ತರಗತಿಯ ಖುಷಿ ಮತ್ತು ಚಿನ್ಮಯಿ ತಯಾರಿಸಿರುವ ಸ್ಮಾರ್ಟ್ ಶೆಡ್ ಮಾದರಿಯಲ್ಲಿ ದನದ ಕೊಟ್ಟಿಗೆಯಲ್ಲಿ ಸ್ವಯಂಚಾಲಿತ ಯಂತ್ರದ ಸಹಾಯದಿಂದ ಸಮಯಕ್ಕೆ ಸರಿಯಾಗಿ ದನಗಳಿಗೆ ಮೇವನ್ನು ಒದಗಿಸುವ ಮಾದರಿ ಪ್ರಥಮ ಬಹುಮಾನ ಪಡೆದಿದೆ.

ಜಾಹೀರಾತು

ಖುಷಿ ಮತ್ತು ಚಿನ್ಮಯಿ

೮ನೇ ತರಗತಿಯ ವಿಘ್ನೇಶ್ ಮತ್ತು ಚರಿತ್ ಮಳೆ ಸಂವೇದಿ ಸೂಚಕವನ್ನು ಬಳಸಿ ತಯಾರಿಸಲಾದ ರೂಫ್ ಕಂಟ್ರೋಲ್ಡ್ ಅರೆಕಾ ಡ್ರೈಯರ್ ಮಾದರಿ ಲಘು ಉದ್ಯೋಗ ಭಾರತಿ ಸಂಸ್ಥೆಯ ಕಡೆಯಿಂದ ಮೆಂಟರ್ಶಿಪ್ ಮಾನ್ಯತೆ ಪಡೆದಿದೆ.

ಶಿಕ್ಷಕಿ ಗಾಯತ್ರಿ

ಸಾರ್ವಜನಿಕ ವಿಭಾಗದಲ್ಲಿ ಕೃಷಿಯಲ್ಲಿ ಹೊಸ ಅವಿಷ್ಕಾರಗಳ ವಿಭಾಗದಲ್ಲಿ ಸಂಸ್ಥೆಯ ಶಿಕ್ಷಕಿ ಗಾಯತ್ರಿ ಬಾಳೆಗೊನೆಯನ್ನು ಪ್ರಾಣಿಗಳಿಂದ ಸಂರಕ್ಷಿಸುವ ಮಾದರಿಯನ್ನು ಪ್ರದರ್ಶಿಸಿ ಜನಮನ್ನಣೆ ಮತ್ತು ಬೇಡಿಕೆ ಪಡೆದಿದ್ದರು.

ಮಕ್ಕಳಲ್ಲಿನ ಸೃಜನಾತ್ಮಕ ಶಕ್ತಿಗೆ ನಾವೀನ್ಯ ರೂಪ ಕೊಡಲು ಶ್ರೀರಾಮ ವಿದ್ಯಾಕೇಂದ್ರದ ಅಟಲ್ ಟಿಂಕರಿಂಗ್ ಲ್ಯಾಬ್ ನಿರಂತರವಾಗಿ ಸಹಕಾರ ಒದಗಿಸಿತ್ತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರಾಜ್ಯಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟ್: ಕಲ್ಲಡ್ಕ ವಿದ್ಯಾರ್ಥಿಗಳ ಸಾಧನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*