ಆತ್ಮನಿಷ್ಠ ಸಂಸ್ಕೃತಿಯ ಸೊಬಗು ದತ್ತತತ್ತ್ವದಲ್ಲಿದೆ: ಒಡಿಯೂರು ಶ್ರೀ

ಆತ್ಮನಿಷ್ಠ ಸಂಸ್ಕೃತಿಯ ಸೊಬಗು ದತ್ತತತ್ತ್ವದಲ್ಲಿದೆ. ಅದೊಂದು ಸುಂದರವಾದ ಸಂಸ್ಕೃತಿ. ದತ್ತ ತತ್ತ್ವವೇ ಸಮರಸ ತತ್ತ್ವ. ಸಮರಸ ತತ್ತ್ವವೇ ಆತ್ಮ ತತ್ತ್ವ. ಆತ್ಮತತ್ತ್ವವನ್ನು ಅರಿತರೆ ಎಲ್ಲರಲ್ಲೂ ಭಗವಂತನಿದ್ದಾನೆ ಎಂಬ ಅರಿವು ನಮಗಾಗುತ್ತದೆ. ಆಗ ನಮ್ಮಿಂದ ಯಾವುದೇ ದುಷ್ಕರ್ಮಗಳು ಆಗುವುದಕ್ಕೆ ಸಾಧ್ಯವಿಲ್ಲ. ಅದೊಂದು ಅನುಭಾವದ ವಿಚಾರವಾಗಿದೆ ಎಂದು ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಸಂದೇಶ ನೀಡಿದರು.

ಜಾಹೀರಾತು

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ದತ್ತ ಜಯಂತಿ ಮಹೋತ್ಸವಶ್ರೀ ದತ್ತ ಮಹಾಯಾಗ ಸಪ್ತಾಹದ ಎರಡನೆಯ ದಿನ ಜರಗಿದ ಶ್ರೀ ಗುರುಚರಿತಾಮೃತ ಪ್ರವಚನದ ವೇಳೆ ಅವರು ದಿವ್ಯ ಉಪಸ್ಥಿತಿಯನ್ನು ಕರುಣಿಸಿ ಸಂಸ್ಕಾರದಿಂದ ಸಂಸ್ಕೃತಿ ಉಳಿಯಲು ಸಾಧ್ಯ. ಸುಸಂಸ್ಕೃತ ಸಮಾಜ ನಿರ್ಮಾಣವಾಗಬೇಕಾದರೆ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಉಜ್ಜುವುದರಿಂದ ಉಜ್ವಲತೆ ಹೆಚ್ಚಾಗುತ್ತದೆ. ಇಹದಿಂದ ಪರಕ್ಕೆ ದಾರಿ ತೋರುವವನೇ ಗುರು. ಅವರೇ ಭಗವಾನ್ ದತ್ತಾತ್ರೇಯರು. ಭೋಗದ ಬದುಕು ಶಾಶ್ವತವಲ್ಲ. ಆಧ್ಯಾತ್ಮಿಕ ಜೀವನವೇ ಶಾಶ್ವತ ಎಂದು ಜಗತ್ತಿಗೆ ಸಾರಿದವರು. ಮರಳುವ ಮುನ್ನ ಅರಳಬೇಕು. ಆಗಲೇ ಜೀವನದ ಸಾರ್ಥಕತೆ ಎಂದರು

ಗುರುತತ್ತ್ವದ ಪ್ರವಚನವನ್ನುಗೈದ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರು ಬುದ್ಧಿಯ ಮಟ್ಟಕ್ಕೆ ಮನಸ್ಸನ್ನು ತರುವುದು. ಮನಸ್ಸಿನ ಮಟ್ಟದಿಂದ ಬುದ್ಧಿಯ ಮಟ್ಟಕ್ಕೆ ಹೋಗುವುದಕ್ಕೆ ದಾರಿ ತೋರಿಸುವವನೇ ಗುರು. ಜಗತ್ತಿನಲ್ಲಿರುವ ಎಲ್ಲವನ್ನು ಗುರುವಾಗಿಸಿಕೊಂಡವರು ಶ್ರೀ ಗುರುದತ್ತಾತ್ರೇಯರು. ಇದರಿಂದ ನಮಗೂ ಪಾಠ ಇದೆ. ಯಾವುದನ್ನು ಜೀವನದಲ್ಲಿ ಅಂಟಿಸಿಕೊಳ್ಳದೇ ತನ್ನಷ್ಟಕ್ಕೆ ತಾನೇ ಜೀವಿಸುವುದು ಉತ್ತಮ. ಇನ್ನೊಬ್ಬರೊಂದಿಗೆ ಬೆರೆಯುವ ಗುಣ ನಮ್ಮಲ್ಲಿರಬೇಕು. ಬದುಕುವುದಕ್ಕಾಗಿ ಉಣ್ಣಬೇಕೆ ಹೊರತು ಉಣ್ಣುವುದಕ್ಕಾಗಿ ಬದುಕುವುದಲ್ಲ. ಸಮುದ್ರದಂತೆ ಬದುಕಿನಲ್ಲಿ ಎಲ್ಲವನ್ನೂ ಸಮಾನವಾಗಿ ಸ್ವೀಕರಿಸುವವರು ನಾವಾಗಬೇಕು ಎಂದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಆತ್ಮನಿಷ್ಠ ಸಂಸ್ಕೃತಿಯ ಸೊಬಗು ದತ್ತತತ್ತ್ವದಲ್ಲಿದೆ: ಒಡಿಯೂರು ಶ್ರೀ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*