ಬಂಟ್ವಾಳ

ಕರ್ನಾಟಕ ರಾಜ್ಯ ರೈತಸಂಘದಿಂದ ಮಂಗಳೂರಲ್ಲಿ 17ರಂದು ಪ್ರತಿಭಟನಾ ಮೆರವಣಿಗೆ

ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರುಸೇನೆ ದ.ಕ.ಜಿಲ್ಲಾ ಘಟಕ ಆಶ್ರಯದಲ್ಲಿ ಜಿಲ್ಲೆಯ ರೈತರ ಪ್ರಮುಖ ಸಮಸ್ಯೆಗಳ ಪರಿಹಾರ ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ಮತ್ತು ಹಕ್ಕೊತ್ತಾಯ ಸಭೆ ಡಿ.17 ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನಲ್ಲಿ ನಡೆಸಲಿದೆ.

ಜಾಹೀರಾತು

ಅಂಬೇಡ್ಕರ್ ವೃತ್ತದಿಂದ ಬೆಳಗ್ಗೆ 11 ಗಂಟೆಗೆ ಹೊರಟು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮೆರವಣಿಗೆ ಸಮಾವೇಶಗೊಳ್ಳಲಿದೆ ಎಂದು ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಮಂಗಳವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ರೈತರ ಬೇಡಿಕೆಗಳಾದ ಜಿಲ್ಲೆಯಲ್ಲಿ ಮಂಕಿಪಾರ್ಕ್, ನವಿಲು ಪಾರ್ಕ್ ನಿರ್ಮಾಣ, ಕರಾವಳಿಗೆ ಘೋಷಿಸಲಾದ ಪ್ಯಾಕೇಜ್ ಜಾರಿ, ಹವಾಮಾನ ಆಧರಿತ ಬೆಳೆವಿಮೆ ಪರಿಹಾರ ವಿತರಣೆ, ಹಾನಿಗೊಳಗಾದ ಕಾಳುಮೆಣಸು ಬಳ್ಳಿಗೆ ವೈಜ್ಞಾನಿಕ ಪರಿಹಾರ, ೯೪ಸಿ, ೯೪ಸಿಸಿ ಅಕ್ರಮ ಸಕ್ರಮ ಅರ್ಜಿ ವಿಲೇವಾರಿಗೆ ತಕ್ಷಣ ಸಮಿತಿ ರಚನೆ, ರಬ್ಬರ್ ಬೆಳೆಗಾರರಿಗೆ ನೆರವು, ಬಂಟ್ವಾಳದಲ್ಲಿ ಸಕ್ರಿಯ ಎಪಿಎಂಸಿ ಮೊದಲಾದ ಮನವಿಗಳನ್ನು ಸಲ್ಲಿಸಲಾಗುವುದು ಎಂದವರು ಹೇಳಿದರು. ರೈತವಿರೋಧಿಯಾದ ಬ್ರೆಜಿಲ್ ದೇಶದ ಪ್ರಧಾನಿ ಬೊಲ್ಸನಾರೋ ಅವರನ್ನು ಗಣರಾಜ್ಯೋತ್ಸವಕ್ಕೆ ಪ್ರಧಾನಿ ಆಹ್ವಾನಿಸಿದ್ದು, ಇದನ್ನೂ ವಿರೋಧಿಸುವುದಾಗಿ ಅವರು ಹೇಳಿದರು.

ಕರ್ನಾಟಕ ರಾಜ್ಯ ರೈತಸಂಘ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡೀಸ್, ಜಿಲ್ಲಾ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಪೆರಾಬೆ, ಬಂಟ್ವಾಳ ತಾಲೂಕು ಘಟಕಾಧ್ಯಕ್ಷ ಪ್ರೇಮನಾಥ ಶೆಟ್ಟಿ ಬಾಳ್ತಿಲ, ಪ್ರಮುಖರಾದ ಅಲೆಕ್ಸ್ ರೋಡ್ರಿಗಸ್, ಸದಾನಂದ ಶೀತಲ್, ವಿವಿಯನ್ ಪಿಂಟೊ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts