ಪ್ರಮುಖ ಸುದ್ದಿಗಳು

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಪ್ರತಿನಿಧಿ ನೋಂದಣಿ ಆರಂಭ

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿ 5, 6 ಮತ್ತು 7 ರಂದು ಕಲಬುರಗಿಯಲ್ಲಿ ನಡೆಯಲಿದೆ. ಈ ನುಡಿ ಜಾತ್ರೆಯಲ್ಲಿ ಭಾಗವಹಿಸಲು ಇಚ್ಛಿಸುವ ಅಭಿಮಾನಿಗಳು ಪ್ರತಿನಿಧಿಯಾಗಿ ತಮ್ಮ ಹೆಸರುಗಳನ್ನು ಆಯಾಯಾ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಲ್ಲಿ ಅಥವಾ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ರೂ.250 ಪ್ರತಿನಿಧಿ ಶುಲ್ಕ ನೀಡಿ ಡಿಸೆಂಬರ್ 12 ರಿಂದ ಜನವರಿ 14 ರೊಳಗೆ ನೋಂದಾಯಿಸಿಕೊಳ್ಳಬಹುದು ಎಂದು  ಪ್ರಕಟಣೆ ತಿಳಿಸಿದೆ.

ಜಾಹೀರಾತು

ಕನ್ನಡ ಸಾಹಿತ್ಯ ಸಮ್ಮೇಳನ ಪುಸ್ತಕ/ವಾಣಿಜ್ಯ ಮಳಿಗೆಗಳನ್ನು ತೆರೆಯಲು ಆಹ್ವಾನ : ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ  ಮೂರು ದಿವಸಗಳಿಗೆ ಒಂದು ಹಾಗೂ ಒಂದಕ್ಕಿಂತ ಹೆಚ್ಚು ಪುಸ್ತಕ ಮಳಿಗೆ ಬೇಕಾದಲ್ಲಿ 2500 ರೂಪಾಯಿ ಬಾಡಿಗೆ ನಿಗದಿಪಡಿಸಲಾಗಿದೆ, ವಾಣಿಜ್ಯ ಮಳಿಗೆಗಳಿಗೆ 3000 ರೂಪಾಯಿ ಬಾಡಿಗೆ ನಿಗದಿಯಾಗಿರುತ್ತದೆ, ಮಳಿಗೆಗಾಗಿ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ/ ಸ್ವಾಗತ ಸಮಿತಿ, 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಕಲಬುರಗಿ ಇಲ್ಲಿ ನೋಂದಾಯಿಸಬೇಕು, ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ, ಡಿಸೆಂಬರ್ 12 ರಿಂದ ಜನವರಿ 14 ರವರೆಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ಕೇಂದ್ರ ಕನ್ನಡ ಸಾಹಿತ್ಯ  ಪರಿಷತ್ತಿನಲ್ಲಿ ಮಳಿಗೆಗಾಗಿ ನೋಂದಾಯಿಸಿಕೊಳ್ಳುವವರು ಅಧ್ಯಕ್ಷರು, ಕನ್ನಡ ಸಾಹಿತ್ಯ ಸಮ್ಮೇಳನ ಸಮಿತಿ ಕಲಬುರಗಿ ಇಲ್ಲಿಗೆ ಡಿಡಿ ತೆಗೆದು ಕಳುಹಿಸಬೇಕು ಅಥವಾ ನಗದನ್ನು ಖುದ್ದಾಗಿ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಭವನ, ಸರದಾರ್ ವಲ್ಲಭಬಾಯಿ ಪಟೇಲ್ ವೃತ್ತ, ಕಲಬುರಗಿ ಇಲ್ಲಿಗೆ ಸಲ್ಲಿಸಬಹುದು. ಪ್ರತಿ ಮಳಿಗೆಗೆ ವಿದ್ಯುತ್ ಸೌಕರ್ಯ, 2 ಕುರ್ಚಿಗಳು, 3 ಬೆಂಚುಗಳನ್ನು ಒದಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08472-277411, 9448577411, 9900838003 ಸಂಪರ್ಕಿಸಬಹುದೆಂದು ಪಿ. ಮಲ್ಲಿಕಾರ್ಜುನಪ್ಪ, ಕನ್ನಡ ಸಾಹಿತ್ಯ ಪರಿಷತ್ತು, ಗೌರವ ಕೋಶಾಧ್ಯಕ್ಷರ ಪ್ರಕಟಣೆ ತಿಳಿಸಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.