ಶಕ್ತಿಶಾಲಿ ಭಾರತ ನಿರ್ಮಾಣ ಅನಾವರಣ- ಕಿರಣ್ ಬೇಡಿ

  • ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಹೊನಲು ಬೆಳಕಿನ ಕ್ರೀಡೋತ್ಸವ

ಶಕ್ತಿಶಾಲಿ ಭಾರತ ನಿರ್ಮಾಣದ ಕನಸು ನನಸಾಗುವುದರಲ್ಲಿ ಸಂಶಯವಿಲ್ಲ ಎಂದು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಡಾ. ಕಿರಣ್ ಬೇಡಿ ಹೇಳಿದ್ದಾರೆ.

ಚಿತ್ರ: ಕಿಶೋರ್ ಪೆರಾಜೆ

ಚಿತ್ರ: ಕಿಶೋರ್ ಪೆರಾಜೆ

ಭಾನುವಾರ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಶ್ರೀರಾಮವಿದ್ಯಾಕೇಂದ್ರದ ವಿದ್ಯಾರ್ಥಿಗಳ ಸಾಮೂಹಿಕ ಪ್ರದರ್ಶನ ದೆಹಲಿಯ ಗಣರಾಜ್ಯೋತ್ಸವದಲ್ಲಿ  ಪ್ರದರ್ಶನಗೊಳ್ಳುವುದರ ಮೂಲಕ ಭಾರತೀಯ ಸಂಸ್ಕೃತಿ  ರಾಷ್ಟ್ರಮಟ್ಟದಲ್ಲಿ ಅನಾವರಣಗೊಳ್ಳಬೇಕು ಎಂದರು.

ಜಾಹೀರಾತು

ಇಂತಹ ಕಾರ್ಯಕ್ರಮ ದೇಶದ ಎಲ್ಲಾ ಶಾಲೆಗಳಲ್ಲಿಯು ಅನುಷ್ಠಾನಗೊಳ್ಳಬೇಕೆ ಎಂದು ಆಶಯ ವ್ಯಕ್ತ ಪಡಿಸಿದರು.

ಜಾಹೀರಾತು

ಜಾರ್ಖಂಡಿನ ಉದ್ಯಮಿ ಒಂಪ್ರಕಾಶ್ , ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನೇತ್ರತಜ್ಙ ಡಾ. ಕೃಷ್ಣ ಪ್ರಸಾದ್,  ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ  ಬರೋಡಾದ ಶಶಿಧರ ಶೆಟ್ಟಿ, ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲಸಾರ್ ,ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ರಹೀಂ ಉಚ್ಚಿಲ್, ಸಿನಿಮಾ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಬಳ್ಳಾರಿ ರಾಜಶೇಖರ ಮುಲಾನಿ, ವಿಹಿಪಂ.ನ ಶ್ರೀಧರ್ ನಾಡಿಗರ್ , ರಾಘವೇಂದ್ರ  ಶಾಸಕ ಹರೀಶ್ ಪೂಂಜಾ ಮಾತನಾಡಿದರು. ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ,ರಾಜ್ಯದ ಸಚಿವೆ ಶಶಿಕಲಾ ಜೊಲ್ಲೆ, ಸಂಸದರಾದ ಉಮೇಶ್ ಜಾದವ್ , ಕೆ.ಸಿ.ರಾಮಮೂರ್ತಿ, , ಶಾಸಕರುಗಳಾದ  ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಅರವಿಂದ ಬೆಲ್ಲದ, ಪಿ.ರಾಜೀವ್ , ಪೂರ್ಣಿಮ  ಅಮೃತ ದೇಸಾಯಿ, ಅವಿನಾಶ್ ಜಾದವ್, ಉಮಾನಾಥ  ಕೋಟ್ಯಾನ್ , ಎಸ್.ಎಲ್.ಬೋಜೇಗೌಡ, ಅರುಣ್ ಜೋಶಿ , ಡಿಜಿಪಿ ಆಶಿತ್ ಮೋಹನ್ ಪ್ರಸಾದ್ ,  ಭ್ರಷ್ಟಾಚಾರ ನಿಗ್ರಹದಳದ ಐಜಿ ಚಂದ್ರಶೇಖರ್, ಜಿಲ್ಲಾ ಎಸ್ಪಿ  ಲಕ್ಷ್ನಿಪ್ರಸಾದ್ , ಸಿನೆಮಾ ನಟಿ ಪ್ರಣೀತಾ ಸುಭಾಷ್ , ಮಾಜಿ ಸಚಿವ ನಾಗರಾಜ ಶೆಟ್ಟಿ,  ಕೃಷ್ಣ ಪಾಲೇಮಾರ್,  ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಕ್ಯಾ.ಗಣೇಶ್ ಕಾರ್ಣಿಕ್ , ರಾಷ್ಟ್ರ ಸೇವಿಕಾದ ಸೀತಕ್ಕ. ನಿವೃತ್ತ ಪೊಲೀಸ್ ಅಧಿಕಾರಿ  ಜಯಂತ ಶೆಟ್ಟಿ, ಕಮಲಾ ಪ್ರಭಾಕರ ಭಟ್, ಟಿ.ಜಿ.ರಾಜಾರಾಮ  ಭಟ್, ಸುರೇಶ್ ಶೆಟ್ಟಿ ಗುರ್ಮೆ, ಎ.ಎಂ.ಖಾನ್,  ಎ.ವಿ.ರವಿ, ಪ್ರಕಾಶ್ ದಾಸನೂರು, ಭರತ್ ಜೈನ್, ಮಂಜುನಾಥ್ ಜಾರ್ಖಂಡ್,  ಪ್ರದೀಪ್ ಕುಮಾರ್ ಕಲ್ಕೂರ, ಜಗದೀಶ್ ಶೇಣವ, ಕ್ಯಾ.ಬ್ರಿಜೇಶ್ ಚೌಟ ಸೇರಿದಂತೆ ಹಲವು ಕ್ಷೇತ್ರಗಳ ಗಣ್ಯರು ಕ್ರೀಡೋತ್ಸವದಲ್ಲಿ ಭಾಗವಹಿಸಿದ್ದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್  ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕ ವಸಂತ ಮಾಧವ ಪ್ರಸ್ತಾವಿಸಿ, ಸ್ವಾಗತಿಸಿದರು.  ವಿದ್ಯಾಕೇಂದ್ರ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ, ಸಹಸಂಚಾಲಕ ರಮೇಶ್,  ಪದವಿ ಕಾಲೇಜು ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶಕ್ತಿಶಾಲಿ ಭಾರತ ನಿರ್ಮಾಣ ಅನಾವರಣ- ಕಿರಣ್ ಬೇಡಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*