ಕಲ್ಲಡ್ಕ

ಮಾಣಿ ಸಮೀಪ ಅಪಘಾತ: ಐವರು ಗಾಯ, ಓರ್ವ ಗಂಭೀರ

ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಮೈಲುಕಲ್ಲಿಗೆ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಾಣಿ ಸಮೀಪ ಮಂಗಳವಾರ ತಡರಾತ್ರಿ ನಡೆದಿದೆ.


ಬಿ.ಮೂಡ ಗ್ರಾಮದ ತಲಪಾಡಿ ನಿವಾಸಿ, ದಿ.ಹಸನಬ್ಬ ಎಂಬವರ ಪುತ್ರರಾದ ಝುಬೈರ್, ಶರೀಫ್, ಸಿರಾಜ್, ವಳವೂರಿನ ಅರಬನಗುಡ್ಡೆಯ ನಿವಾಸಿ, ಹಮೀದ್ ಎಂಬವರ ಪುತ್ರರಾದ ಮುಸ್ತಫಾ, ಆಸಿಫ್ ಗಾಯಗೊಂಡವರು. ಇವರಲ್ಲಿ ಸಿರಾಜ್ ಗಂಭೀರ ಗಾಯಗೊಂಡಿದ್ದಾರೆ.
ಇವರೆಲ್ಲರು ಎಸ್ಕೆಎಸ್ಸೆಸ್ಸೆಫ್ ತಲಪಾಡಿ ಘಟಕದ ಕಾರ್ಯಕರ್ತರಾಗಿದ್ದು, ಸಮಸ್ತ ಸಮ್ಮೇಳನಕ್ಕೆಂದು ತಮ್ಮ ಕಾರಿನಲ್ಲಿ ಮಂಗಳವಾರ ಮಡಿಕೇರಿಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ರಾತ್ರಿ ಹಿಂದಿರುಗುವ ವೇಳೆ ಮಾಣಿ ಸಮೀಪದ ಕೊಡಾಜೆ ಮಸೀದಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ಇಲ್ಲಿನ ಮೈಲುಗಲ್ಲುವೊಂದಕ್ಕೆ ಢಿಕ್ಕಿ ಹೊಡೆದು, ಉರುಳಿದೆ. ಅಪಘಾತದ ತೀವ್ರತೆಗೆ ಸಿರಾಜ್ ಎಂಬವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಪ್ರಯಾಣಿಕರಾದ ಝುಬೈರ್, ಸಿರಾಜ್, ಮುಸ್ತಫಾ, ಆಸಿಫ್ ಗಾಯಗೊಂಡಿದ್ದು, ಇವರನ್ನು ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts