ಬಂಟ್ವಾಳ

ಜೇಸಿಐ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷರಾಗಿ ಶ್ರೀನಿಧಿ ಭಟ್, ಡಿ. 22 ರಂದು ಪದಗ್ರಹಣ

2020ನೇ ಸಾಲಿಗೆ ಜೇಸಿಐ ಜೋಡುಮಾರ್ಗ ನೇತ್ರಾವತಿಯ ಅಧ್ಯಕ್ಷರಾಗಿ ಶ್ರೀನಿಧಿ ಭಟ್ ಟಿ.ಎನ್. ಆಯ್ಕೆಯಾಗಿದ್ದಾರೆ. ಡಿಸೆಂಬರ್ 22ರೆಂದು ಬಿ.ಸಿ.ರೋಡಿನ ಪದ್ಮಾ ಕಾಂಪ್ಲೆಕ್ಸ್ ನಲ್ಲಿ ಸಂಜೆ 7 ಗಂಟೆಗೆ ಪದಗ್ರಹಣ ಸಮಾರಂಭ ನಡೆಯಲಿದೆ.

ಜಾಹೀರಾತು

ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ಬಂಟ್ವಾಳ ಸರ್ಕಲ್ ಪೋಲೀಸ್ ಇನ್‌ಸ್ಪೆಕ್ಟರ್ ಟಿ.ಡಿ. ನಾಗರಾಜ್,  ಜೇಸಿಐ ವಲಯ ೧೫ರ ವಲಯಾಧ್ಯಕ್ಷ ಕಾರ್ತಿಕೇಯ ಮಧ್ಯಸ್ಥ ಮತ್ತು ಪದಗ್ರಹಣ ಅಧಿಕಾರಿಯಾಗಿ ವಲಯ ೧೫ರ ವಲಯ ಉಪಾಧ್ಯಕ್ಷ ಜೇಸಿ ಮೇಧಾವಿ ಭಾಗವಹಿಸಲಿರುವರು ಎಂದು ಜೇಸಿ ಅಧ್ಯಕ್ಷ ಹರ್ಷರಾಜ್ ಸಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪದಾಧಿಕಾರಿಗಳಾಗಿ ಶ್ರೀನಿಧಿ ಭಟ್ (ಅಧ್ಯಕ್ಷ), ಹರ್ಷರಾಜ್ ಸಿ (ಐಪಿಪಿ), ಸುಬ್ರಹ್ಮಣ್ಯ ರಾವ್ ಪಿ (ಕಾರ್ಯದರ್ಶಿ), ಲಕ್ಷ್ಮಣ್ (ಜತೆ ಕಾರ್ಯದರ್ಶಿ), ಖಜಾಂಚಿಯಾಗಿ ಕಿಶನ್ ಎನ್. ರಾವ್, ಉಪಾಧ್ಯಕ್ಷರುಗಳಾಗಿ ಆಶಿಕ್ ಕುಕ್ಕಾಜೆ, ಅಮಿತಾ ಹರ್ಷರಾಜ್, ಗಾಯತ್ರಿ ಲೋಕೇಶ್, ಕೃಷ್ಣರಾಜ್ ರಾವ್ ಮತ್ತು ನರಸಿಂಹ ಮಯ್ಯ, ಮಲ್ಲಿಕಾ ಆಳ್ವ (ಜೇಸಿರೆಟ್ ಅಧ್ಯಕ್ಷೆ), ಅಭಿಷೇಕ್ (ಜೇಜೇಸಿ ಅಧ್ಯಕ್ಷ), ಜಯರಾಜ್ ಎಸ್. ಬಂಗೇರ, ಧೀರಜ್ ಹೆಚ್., ಹರಿಶ್ವಂದ್ರ ಆಳ್ವ, ರವೀಂದ್ರ ಕುಕ್ಕಾಜೆ, ಶೈಲಜಾ ರಾಜೇಶ್ ಹಾಗೂ ಹರಿಪ್ರಸಾದ್ ಕುಲಾಲ್ (ನಿರ್ದೇಶಕರು) ಇವರು ಆಯ್ಕೆಗೊಂಡಿರುತ್ತಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ