ಸಹಜಸ್ಥಿತಿಗೆ ಮರಳಿದ ಬಂಟ್ವಾಳ

ಶನಿವಾರ ಬಂಟ್ವಾಳದಲ್ಲಿ ವ್ಯಾಪಾರ, ವಹಿವಾಟು ಎಂದಿನಂತೆ ನಡೆಯಿತು. ಬಿಗು ಪೊಲೀಸ್ ಬಂದೋಬಸ್ತ್ ಇದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರ ಅಬಾಧಿತವಾಗಿದ್ದರೆ, ಮಂಗಳೂರಿಗೆ ತೆರಳುವ ಬಸ್ಸುಗಳು ಹಾಗೂ ಖಾಸಗಿ ಬಸ್ಸುಗಳನ್ನು ಹೊರತುಪಡಿಸಿ, ಸರಕಾರಿ ಬಸ್ ಸಂಚಾರ ಇತ್ತು.

ಜಾಹೀರಾತು

ಸರಕಾರಿ ಕಚೇರಿ ಮತ್ತು ಬ್ಯಾಂಕುಗಳಲ್ಲಿ ಶುಕ್ರವಾರಕ್ಕಿಂತ ಶನಿವಾರ ಜನಸಂಖ್ಯೆ ಇತ್ತು. ಹೋಟೆಲ್, ಮಳಿಗೆಗಳಿಗೆ ನಿರೀಕ್ಷಿತ ವ್ಯಾಪಾರ ಇಲ್ಲದೇ ಇದ್ದರೂ ಮಧ್ಯಾಹ್ನದ ಬಳಿಕ ಚಟುವಟಿಕೆಗಳು ವೇಗ ಪಡೆದವು. ಬಿ.ಸಿ.ರೋಡಿಗೆ ಆಗಮಿಸುವ ಸ್ಥಳೀಯ ಬಸ್ಸುಗಳಾದ ಮೂಡುಬಿದಿರೆ, ಸರಪಾಡಿ, ಸಿದ್ಧಕಟ್ಟೆ, ಪೊಳಲಿ ಕಡೆಗಳಿಗೆ ತೆರಳುವ ಬಸ್ಸುಗಳು ಇರಲಿಲ್ಲ. ಆದರೆ ಖಾಸಗಿ ವಾಹನಗಳು, ಆಟೊಗಳು ಇದ್ದ ಕಾರಣ ತುರ್ತು ಅಗತ್ಯವುಳ್ಳವರು ಅವುಗಳನ್ನು ನೆಚ್ಚಿಕೊಳ್ಳಬೇಕಾಯಿತು.

ಮಂಗಳೂರಿನಲ್ಲಿ ನಡೆದ ಅಹಿತಕರ ಘಟನೆ ಹಾಗೂ ದ.ಕ.ಜಿಲ್ಲೆಯಾದ್ಯಂತ ಶುಕ್ರವಾರ ಬಂದ್ ವಾತಾವರಣ ಇದ್ದ ಹಿನ್ನೆಲೆಯಲ್ಲಿ ಶುಕ್ರವಾರ ಬಸ್ಸುಗಳು ಸಂಚರಿಸದೇ ಇರುವುದು ಹಾಗೂ ಶನಿವಾರವೂ ಕಡಿಮೆ ಜನರ ಓಡಾಟ ಇದ್ದ ಕಾರಣ ಕೆಎಸ್ಸಾರ್ಟಿಸಿ ಬಂದ್ ಘಟನೆಯಿಂದ ನಷ್ಟ ಅನುಭವಿಸಬೇಕಾಯಿತು. ಬಿ.ಸಿ.ರೋಡ್ ಘಟಕದಿಂದ ರಾತ್ರಿ ಬೆಂಗಳೂರಿಗೆ ತೆರಳುವ ಬಸ್ಸುಗಳನ್ನು ಹೊರತುಪಡಿಸಿದರೆ 16 ಬಸ್ ಗಳ ಸಂಚಾರವನ್ನು ಶುಕ್ರವಾರ ರದ್ದುಗೊಳಿಸಬೇಕಾಯಿತು ಎಂದು ಡಿಪೊ ಮ್ಯಾನೇಜರ್ ಶ್ರೀಷ ಭಟ್ ಸುದ್ದಿಗಾರರಿಗೆ ತಿಳಿಸಿದರು.

ಜಾಹೀರಾತು

ಡಿಪೊದಿಂದ ದಿನವಹಿ 59 ಬಸ್ಸುಗಳು ಸಂಚಾರಕ್ಕೆ ಹೊರಡುತ್ತವೆ. ಆದರೆ ಶುಕ್ರವಾರ 16 ಬಸ್ಸುಗಳ ಸಂಚಾರವನ್ನು ರದ್ದುಪಡಿಸಲಾಗಿತ್ತು. ಭದ್ರತೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಉಳಿದ ಮಾರ್ಗಗಳಿಗೆ ತೆರಳುವ ಬಸ್ಸುಗಳನ್ನೂ ಪರಿಸ್ಥಿತಿ ನೋಡಿ ಕಳುಹಿಸಲಾಯಿತು. ಆದರೆ ಶನಿವಾರ ಮಂಗಳೂರಿಗೆ ತೆರಳುವ ಬಸ್ಸುಗಳನ್ನು ಹೊರತುಪಡಿಸಿ ಉಳಿದ ಬಸ್ಸುಗಳ ಸಂಚಾರ ನಡೆಸಲಾಗಿದೆ ಎಂದವರು ಹೇಳಿದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಹಜಸ್ಥಿತಿಗೆ ಮರಳಿದ ಬಂಟ್ವಾಳ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*