ಕರ್ಫ್ಯೂ ಸಡಿಲಿಕೆ, ಸೋಮವಾರದಿಂದ ಇರೋದಿಲ್ಲ, ಘಟನೆ ಸಮಗ್ರ ವರದಿಗೆ ಸೂಚನೆ : ಸಿಎಂ ಯಡಿಯೂರಪ್ಪ

  • ಭಾನುವಾರ ರಾತ್ರಿ ಮಾತ್ರ ಕರ್ಫ್ಯೂ, ಸೋಮವಾರ ಸಂಪೂರ್ಣ ತೆರವು, ಕ್ರಿಸ್ಮಸ್ ಆಚರಣೆಗೆ ಅಡಚಣೆ ಇಲ್ಲ

ಮುಖಂಡರ ಮನವಿ ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ಬಳಿಕ ಮಂಗಳೂರಿಗೆ ಶನಿವಾರ ಮಧ್ಯಾಹ್ನ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕರ್ಫ್ಯೂ ಸಡಿಲಗೊಳಿಸುವ ಕುರಿತು ಮಾಹಿತಿ ನೀಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 6ರವರೆಗೆ ಕರ್ಫ್ಯೂ ಇರುವುದಿಲ್ಲ. ರಾತ್ರಿ ಮತ್ತೆ ಜಾರಿಯಾಗುತ್ತದೆ. ಭಾನುವಾರ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಸಡಿಲಿಕೆ, ರಾತ್ರಿಯಿಂದ ಸೋಮವಾರ ಬೆಳಿಗ್ಗೆಯವರೆಗೆ ಮತ್ತೆ ಕರ್ಫ್ಯೂ ಜಾರಿ, ನಂತರ ಸೆ.144ರನ್ವಯ ನಿಷೇಧಾಜ್ಞೆಯಷ್ಟೇ ಇರಲಿದೆ ಎಂದು ಸಿಎಂ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಜಾಹೀರಾತು

ಕ್ರಿಸ್ಮಸ್ ಸೇರಿದಂತೆ ಹಬ್ಬ ಆಚರಣೆಗೆ ಅಡ್ಡಿ ಇರುವುದಿಲ್ಲ, ಈ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚಿಸಲಾಗಿದೆ ಎಂದವರು ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪರಿಹಾರ: ಮಂಗಳೂರು ಹಿಂಸಾಚಾರ ಘಟನೆಯಿಂದ ನೋವಾಗಿದೆ ಎಂದ ಸಿಎಂ ಯಡಿಯೂರಪ್ಪ,  ಪೊಲೀಸ್ ಗುಂಡೇಟಿಗೆ ಬಲಿಯಾದವರ ಕುಟುಂಬಿಕರಿಗೆ ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಪೊಲೀಸ್ ಗೋಲಿಬಾರ್ ನಿಂದ ಮೃತಪಟ್ಟ ಕುಟುಂಬಸ್ಥರ ಜತೆಯೂ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿ ಅವರ ಭಾವನೆಗಳಿಗೆ ಸ್ಪಂದಿಸಿ ಅವರಿಗೆ ಸಾಂತ್ವನ ಹೇಳಿದ್ದೇನೆ ಎಂದರು.

ಜಾಹೀರಾತು

ಸಮಗ್ರ ವರದಿ: ಹಿಂಸಾತ್ಮಕ ಘಟನೆ ಹಾಗೂ ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿರುವ ಘಟನೆ ಸಂಬಂಧ ಸಮಗ್ರವಾದ ವರದಿ ನೀಡಲು ಸೂಚಿಸಿದ್ದೇನೆ ಎಂದು ಇದಕ್ಕೂ ಮುನ್ನ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪೊಲೀಸ್‌ ಇಲಾಖೆಯ ಉನ್ನತ ಅಧಿಕಾರಿಗಳು, ಜಿಲ್ಲಾಧಿಕಾರಿ, ಜಿಲ್ಲೆಯ ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಅಹಿತಕರ ಘಟನೆ ನಡೆದ ಬಗ್ಗೆ ಹಾಗೂ ಕಾನೂನು ಸುವ್ಯವಸ್ಥೆ ಪಾಲನೆ ಬಗ್ಗೆ ಉನ್ನತ ಮಟ್ಟದ ಸಭೆಯನ್ನು ಅವರು ನಡೆಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕರ್ಫ್ಯೂ ಸಡಿಲಿಕೆ, ಸೋಮವಾರದಿಂದ ಇರೋದಿಲ್ಲ, ಘಟನೆ ಸಮಗ್ರ ವರದಿಗೆ ಸೂಚನೆ : ಸಿಎಂ ಯಡಿಯೂರಪ್ಪ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*