ಬಂಟ್ವಾಳ

ನಿಯಮಾವಳಿ ಪ್ರಕಾರವೇ ಕಬಡ್ಡಿ ಪಂದ್ಯಾಟ: ಎಸೋಸಿಯೇಶನ್ ಮನವಿ

ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ವಾರ್ಷಿಕ ಮಹಾಸಭೆ ಬಿ.ಸಿ.ರೋಡ್ ರೋಟರಿ ಬಾಲ ಭವನ ಸಭಾಂಗಣದಲ್ಲಿ ಭಾನುವಾರ ನಡೆಯಿತು.

ಜಾಹೀರಾತು

ಎಸೋಸಿಯೇಶನ್ ಅಧ್ಯಕ್ಷ ಬೇಬಿ ಕುಂದರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಅವಿಭಜಿತ ದ.ಕ. ಜಿಲ್ಲೆಯಲ್ಲಿ ಜಿಲ್ಲಾ ಎಸೋಸಿಯೇಶನ್ ನಿಯಮಾವಳಿ ಪ್ರಕಾರ ಕಬಡ್ಡಿ ಪಂದ್ಯಾಟ ನಡೆಸಲಾಗುತ್ತಿದ್ದು, ಕಬಡ್ಡಿ ಸಂಘಟಕರು, ಆಟಗಾರರು ಸಹಕರಿಸಬೇಕು ಎಂದು ಹೇಳಿದರು.

ಎಸೋಸಿಯೇಶನ್ ಜಿಲ್ಲಾ ಸಮಿತಿ ಪ್ರ.ಕಾರ್ಯದರ್ಶಿ ಉದಯ ಕುಮಾರ್ ಚೌಟ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.ಬಂಟ್ವಾಳ ಕಬಡ್ಡಿ ಎಸೋಸಿಯೇಶನ್ ಕಾರ್ಯಾಧ್ಯಕ್ಷ ಪುಷ್ಪರಾಜ ಚೌಟ,ಪೋಷಕ ಮಂಜುನಾಥ ಆಚಾರ್ಯ, ಉಪಾಧ್ಯಕ್ಷರಾದ ರಮಾನಾಥ ವಿಟ್ಲ, ಬಾಲಕೃಷ್ಣ ನರಿಕೊಂಬು, ಬಾಬು ಮಾಸ್ಟರ್ ತುಂಬೆ, ಲೋಕನಾಥ ಶೆಟ್ಟಿ ಬಿ.ಸಿ.ರೋಡ್, ತೀರ್ಪುಗಾರರ ಮಂಡಳಿ ಅಧ್ಯಕ್ಷ ಸುರೇಶ್ ಮೈರಡ್ಕ, ಎಸೋಸಿಯೇಶನ್ ಸದಸ್ಯರು, ಕಬಡ್ಡಿ ತಂಡದ ಆಟಗಾರರು , ಕಬಡ್ಡಿ ಪಂದ್ಯಾಟದ ಸಂಘಟಕರು  ಉಪಸ್ಥಿತರಿದ್ದರು. ಕೋಶಾಧಿಕಾರಿ ಉಮಾನಾಥ ರೈ ಮೇರಾವು ಅವರು ಸ್ವಾಗತಿಸಿ, ಲೆಕ್ಕಪತ್ರ ಮಂಡಿಸಿದರು. ಕಾರ್ಯದರ್ಶಿ ಚಂದ್ರಶೇಖರ ಕರ್ಣ ವರದಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts