ಮಂಗಳೂರಿನ ಸದ್ಗುರು ಸಂಗೀತ ಪಾಠಶಾಲಾ (ರಿ), ಪಲ್ಲವಿ ಕ್ಲಾಸಿಕಲ್ಸ್ ವತಿಯಿಂದ ಡಿ.25ರಂದು ಕರಂಗಲಪಾಡಿಯ ಸುಬ್ರಹ್ಮಣ್ಯ ಸಭಾದಲ್ಲಿ ಶ್ರೀ ಸೀತಾರಾಮ ಕಲ್ಯಾಣೋತ್ಸವ ಸಹಿತ ಸದ್ಗುರು ಶ್ರೀ ತ್ಯಾಗರಾಜ ಪುರಂದರ ಉತ್ಸವ ನಡೆಯಲಿದೆ ಎಂದು ಸಂಗೀತ ಶಿಕ್ಷಕರಾದ ನಾದಶ್ರೀ ಗಣೇಶ್ ರಾಜ್ ಎಂ.ವಿ. ತಿಳಿಸಿದ್ದಾರೆ.
ಇದೇ ವೇಳೆ ಬೆಳಗ್ಗೆ 8ರಿಂದ ಕಾರ್ಯಕ್ರಮಗಳು ನಡೆಯಲಿದ್ದು, 10ಕ್ಕೆ ನಾದಶ್ರೀ ಗಣೇಶ್ ರಾಜ್ ಎಂ.ವಿ. ಮತ್ತು ಬಳಗದವರಿಂದ ಶ್ರೀ ತ್ಯಾಗರಾಜ ಪಂಚರತ್ನ ಕೃತಿಗಳ ಗೋಷ್ಠಿ ಗಾಯನ ಇರಲಿದೆ. 11 ಗಂಟೆಗೆ ಪಲ್ಲವಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ವಿದ್ವಾಂಸರಾದ ವೆಳ್ಳಿಕ್ಕೋತ್ ವಿಷ್ಣು ಭಟ್ ಕೆ. ಮತ್ತು ಬಾಲಕೃಷ್ಣ ಹೊಸಮನೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಈ ವೇಳೆ ಕರ್ಣಾಟಕ ಬ್ಯಾಂಕ್ ಅಧ್ಯಕ್ಷ ಪಿ.ಜಯರಾಮ ಭಟ್, ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಭಾಗವಹಿಸುವರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "25ರಂದು ಮಂಗಳೂರಿನಲ್ಲಿ ಪಲ್ಲವಿ ಪ್ರಶಸ್ತಿ ಪ್ರದಾನ"