ಕಲ್ಲಡ್ಕ

ಭಾಷಣದ ವೇದಿಕೆಗಿಂತ ಪ್ರತಿಭಾ ಪ್ರದರ್ಶನಕ್ಕೆ ಹೆಚ್ಚು ಅವಕಾಶ ಅಗತ್ಯ: ರಾಜೇಶ್ ನಾಯ್ಕ್

ಬದಲಾವಣೆಯ ಹೊಸದಿಕ್ಕಿನಲ್ಲಿ ಹೊಸ ಹೆಜ್ಜೆ ಇಟ್ಟು ಭಾಷಣದ ವೇದಿಕೆಯನ್ನು ತೆರವುಗೊಳಿಸಿ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯನ್ನು ಕಲ್ಪಿಸಿಕೊಡಬೇಕೆಂದು, ಕೊಳ್ನಾಡು ಮಂಚಿ ಪ್ರೌಢಶಾಲಾ ೪೨ನೇ ವಾರ್ಷಿಕೋತ್ಸವದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಜಾಹೀರಾತು

ಶಾಲಾ ನೀಲನಕಾಶೆ ಹೊಂದಿದ ಶಾಲೆಯ ಒಟ್ಟು ಸಾಧನೆಗಳ ಪಕ್ಷಿನೋಟದ ಕಿರುಹೊತ್ತಿಗೆಯನ್ನು ಬಿಡುಗಡೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೊಳ್ನಾಡು ಕ್ಷೇತ್ರದ ಜಿ.ಪಂ.ಸದಸ್ಯ ಎಂ.ಎಸ್ ಮಹಮ್ಮದ್ ಮಾತನಾಡಿ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳನ್ನು ಗುರುತಿಸುವ ಮತ್ತು ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಒದಗಿಸುವ ಶಾಲಾ ವರ್ಷದ ಉತ್ಸವವು ವಿದ್ಯಾರ್ಥಿಗಳ ಪಾಲಿಗೆ ಅಮೂಲ್ಯವಾದದ್ದು ಎಂದರು. ಬಂಟ್ವಾಳ ತಾ.ಪಂ.ಉಪಾಧ್ಯಕ್ಷರಾದ ಅಬ್ಬಾಸ್ ಆಲಿ ಮಾತನಾಡಿ ಶಾಲೆಗೆ ಆಗಮಿಸುವ ಪ್ರತೀ ವಿದ್ಯಾರ್ಥಿಯೂ ಕಲಿಕೆಯ್ಲಲಿ ಉತ್ತಮ ಪ್ರಗತಿಯನ್ನು ಸಾಧಿಸಲು ಶ್ರಮಿಸಬೇಕು. ವಿದ್ಯಾರ್ಥಿದೆಸೆಯಲ್ಲಿ ತಾನು ಗಳಿಸಿದ ಪದವಿ ಮೂಲಕ ಸಮಾಜದಲ್ಲಿ ಗುರುತಿಸಲ್ಪಡುವ ವ್ಯಕ್ತಿಯಾಗಿ ನಿರ್ಮಾಣವಾಗುತ್ತಾನೆ ಎಂದರು.

ತಾ.ಪಂ.ಸದಸ್ಯರಾದ ನಾರಾಯಣ ಶೆಟ್ಟಿ ಕುಲ್ಯಾರು, ಶಾಲಾಭಿವೃದ್ಧಿ ಸಮಿತಿ ಕಾರ್‍ಯಾಧ್ಯಕ್ಷರಾದ ಪ್ರವೀಣ್ ಕೊಟ್ಟಾರಿ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು. ಕೊಳ್ನಾಡು ಗ್ರಾ.ಪಂ.ಸದಸ್ಯರಾದ ವನಜಾ ಪೆರ್ಲದಬೈಲು, ಮಂಚಿ ಗ್ರಾ.ಪಂ. ಉಪಾಧ್ಯಕ್ಷರಾದ ಮೋಹನದಾಸ್ ಶೆಟ್ಟಿ ಮತ್ತು ಮಂಚಿ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ  ಇಂದಿರಾ ಅತಿಥಿಗಳಾಗಿ ಆಗಮಿಸಿದ್ದರು. ಮುಖ್ಯೋಪಾಧ್ಯಾಯ ವಿ.ಶ್ರೀರಾಮಮೂರ್ತಿ  ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಿಂದಿ ಶಿಕ್ಷಕಿ ಶಾಂತ ಎಸ್ ಸ್ವಾಗತಿಸಿ,  ಗಣಿತ ಶಿಕ್ಷಕಿ ಸುಮಿತ್ರ ವಂದಿಸಿ, ಕಲಾ ಶಿಕ್ಷಕ ಶ್ರೀ ಜಗನ್ನಾಥ ಪಿ ಕಾರ್‍ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

36 minutes ago