ಬಂಟ್ವಾಳ

ಕರಾವಳಿ ಕಲೋತ್ಸವದಿಂದ ಜಿಲ್ಲೆಗೆ ಮೆರುಗು: ರಮಾನಾಥ ರೈ

ದ.ಕ.ಜಿಲ್ಲೆಗೆ ಕರಾವಳಿ ಕಲೋತ್ಸವದಂತಹ ಕಾರ್ಯಕ್ರಮಗಳು ಹೊಸ ಮೆರುಗನ್ನು ತಂದುಕೊಡುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಜಾಹೀರಾತು

ಮಂಗಳವಾರ ರಾತ್ರಿ ಬಿ.ಸಿ.ರೋಡಿನ ಗಾಣದಪಡ್ಪು ಬಳಿಯ ಮೈದಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಬಂಟ್ವಾಳ ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಆಯೋಜಿಸಿರುವ ಕರಾವಳಿ ಕಲೋತ್ಸವದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೇಶದ ಬೆಳವಣಿಗೆಗೆ ಸಾಮರಸ್ಯ ಅತಿ ಅಗತ್ಯವಾಗಿದ್ದು, ನಾವೆಲ್ಲರೂ ಅದಕ್ಕೆ ಒತ್ತು ನೀಡಬೇಕಿದೆ. ದೇಶದಲ್ಲಿ ಯಾವುದೋ ಧರ್ಮ, ಜಾತಿಗೆ ಅನ್ಯಾಯವಾದರೆ ಅದು ಇಡೀ ದೇಶಕ್ಕೆ ಆಪತ್ತು ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ನ್ಯಾಯವಾದಿ ಅಶ್ವನಿಕುಮಾರ್ ರೈ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಸ್ವರ್ಣೋದ್ಯಮಿ ಸುನೀಲ್ ಆಚಾರ್ಯ, ಬಾಲನಟಿ ಅದ್ವಿಕಾ ಶೆಟ್ಟಿ, ಕರಾವಳಿ ಕಲೋತ್ಸವದ ಅಧ್ಯಕ್ಷ ಸುದರ್ಶನ್ ಜೈನ್, ಗೌರವಾಧ್ಯಕ್ಷ ಪಿ.ಜಯರಾಮ ರೈ ವಿಟ್ಲ, ಚಿಣ್ಣರೋತ್ಸವದ ಅಧ್ಯಕ್ಷ ಆಶ್ಲೇಷ್ ಕೆ.ಪೊಲೀಸ್‌ಲೇನ್ ಉಪಸ್ಥಿತರಿದ್ದರು. ಚಿಣ್ಣರ ಲೋಕ ಸೇವಾ ಟ್ರಸ್ಟ್‌ನ ಪ್ರಧಾನ ಸಂಚಾಲಕ ಮೋಹನದಾಸ ಕೊಟ್ಟಾರಿ ಮುನ್ನೂರು ಪ್ರಸ್ತಾವನೆಗೈದರು. ನಿರ್ದೇಶಕರಾದ ಲೋಕೇಶ್ ಸುವರ್ಣ ಸ್ವಾಗತಿಸಿ, ರಾಜೇಶ್ ಕೊಟ್ಟಾರಿ ವಂದಿಸಿದರು. ರಾಜೀವ ಕಕ್ಯಪದವು ನಿರೂಪಿಸಿದರು. ಬಳಿಕ ಕರಾವಳಿ ಡ್ಯಾನ್ಸ್ ಡಮಾಕಾ ನೃತ್ಯ ಸ್ಪರ್ಧೆ ಜರಗಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ