ಕಲ್ಲಡ್ಕ

ಸೂರಿಕುಮೇರು ಚರ್ಚ್ ನಲ್ಲಿ ಹೈಮಾಸ್ಟ್ ದೀಪ ಲೋಕಾರ್ಪಣೆ

ಸಮಾಜದಲ್ಲಿ ಶಾಂತಿ ಸಾಮರಸ್ಯವನ್ನು ಕಾಯ್ದುಕೊಳ್ಳುವ ಮೂಲಕ ಕ್ಷೇತ್ರವನ್ನು‌ ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಸರ್ವರ ಸಹಕಾರದ ಅಗತ್ಯವಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.  ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ಆವರಣದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ  ಅನುದಾನದಿಂದ ನಿರ್ಮಿಸಲಾದ ಹೈಮಾಸ್ಟ್ ದೀಪವನ್ನು  ಅವರು ಮಂಗಳವಾರ ರಾತ್ರಿ ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು

ಚರ್ಚ್ ಧರ್ಮಗುರು ವಂದನೀಯ ಫಾದರ್ ಗ್ರೆಗರಿ ಪಿರೇರಾ ಆಶೀರ್ವಚನ ನೀಡಿದರು.  ಮಾಣಿ ಗ್ರಾ.ಪಂ.ಅಧ್ಯಕ್ಷೆ    ಮಮತಾ ಶೆಟ್ಟಿ ನಾಮಫಲಕ ಅನಾವರಣ ಗೊಳಿಸಿದರು.  ಚರ್ಚ್ ನ ಶತಮಾನೋತ್ತರ ಬೆಳ್ಳಿಹಬ್ಬದ ಅಂಗವಾಗಿ ನಿರ್ಮಿಸಲಾದ ರಂಗವೇದಿಕೆಯನ್ನು ಸಿಸ್ಟರ್ ನ್ಯಾನ್ಸಿ ಉದ್ಘಾಟಿಸಿದರು.   ಧರ್ಮಗುರುಗಳಾದ   ಫಾದರ್ ವಿಕ್ಟರ್  ಡಯಾಸ್ , ಫಾದರ್ ಜಯಕುಮಾರ್, ಪಾಲನಾ ಸಮಿತಿ   ಕಾರ್ಯದರ್ಶಿ ಪ್ರೀತಿ ಪಿರೇರಾ , ವಿದ್ಯುತ್ ಗುತ್ತಿಗೆದಾರ   ಬಾಲಕೃಷ್ಣ ಸೇರ್ಕಳ ಮೊದಲಾದವರು ಉಪಸ್ಥಿತರಿದ್ದರು.  ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ  ರೋಷನ್ ಬೊನಿಫಾಸ್ ಮಾರ್ಟಿಸ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಅವರನ್ನು ಸೂರಿಕುಮೇರು ಚರ್ಚ್ ಪಾಲನಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಗುತ್ತಿಗೆದಾರ ಬಾಲಕೃಷ್ಣ ಸೇರ್ಕಳ ಅವರನ್ನು ಗೌರವಿಸಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ