ಬಂಟ್ವಾಳ

ಡಾ. ನಾ. ಮೊಗಸಾಲೆ ಅವರಿಗೆ ದಿ.ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿ ಪ್ರದಾನ

ಬಂಟ್ವಾಳ: ಶನಿವಾರ ಸಂಜೆ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದಿ.ನೀರ್ಪಾಜೆ ಭೀಮ ಭಟ್ಟರ ಅಭಿಮಾನಿ ಬಳಗ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ಘಟಕ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಕನ್ನಡದ ಕಲ್ಹಣ ದಿ.ನೀರ್ಪಾಜೆ ಪ್ರಶಸ್ತಿಯನ್ನು ಹಿರಿಯ ಸಾಹಿತಿ, ಸಂಘಟಕ ಡಾ. ನಾ.ಮೊಗಸಾಲೆ ಅವರಿಗೆ ನೀಡಿ ಗೌರವಿಸಲಾಯಿತು.

ಜಾಹೀರಾತು

ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ದಿ.ನೀರ್ಪಾಜೆ ಅವರ ಬದುಕು, ಸಾಧನೆ ಹಾಗೂ ಅವರೊಂದಿಗಿನ ಒಡನಾಟಗಳನ್ನು ಸ್ಮರಿಸಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಮೊಗಸಾಲೆ, ದಿ.ನೀರ್ಪಾಜೆ ಭೀಮ ಭಟ್ಟರ ಬರೆಹ ಬೇರೆಯಲ್ಲ, ಬದುಕು ಬೇರೆಯಲ್ಲ, ಅವರು ಬರೆದಂತೆ ಬದುಕಿದವರು. ಬಹುತೇಕ ಸಾಹಿತಿಗಳು ಕೇವಲ ಬರಹಗಳಿಗೆ ಮಾತ್ರ ಸೀಮಿತರಾಗಿದ್ದರೆ, ನೀರ್ಪಾಜೆ ಅವನ್ನೆಲ್ಲ ಮೀರಿ ಸಾಹಿತ್ಯ ಲೋಕದಲ್ಲಿ ಮಿಂಚಿದವರು ಎಂದರು.

ಅಧ್ಯಕ್ಷತೆ ವಹಿಸಿದ್ದ ಕುವೆಂಪು ಭಾಷಾ ಪ್ರಾಧಿಕಾರದ ಅಧ್ಯಕ್ಷ ಡಾ. ಗಿರೀಶ ಭಟ್ಟ ಅಜಕ್ಕಳ ಮಾತನಾಡಿ, ಸಂಸ್ಕೃತಿ ಜೊತೆ ಸಂಬಂಧಗಳನ್ನು ಬೆಸೆಯುವ ಕೆಲಸವನ್ನು ಅನುವಾದಕರು ಮಾಡುತ್ತಾರೆ. ಸಾಹಿತ್ಯ ಸಂಘಟನೆ ಚಟುವಟಿಕೆಗಳನ್ನು ನಡೆಸುವ ಮೂಲಕ ಹಲವು ಸಾಹಿತ್ಯಾಭಿರುಚಿ ಇರುವ ಮನಸ್ಸುಗಳನ್ನು ಒಂದೆಡೆ ಸೇರಿಸುವ ಮಹತ್ತರ ಜವಾಬ್ದಾರಿ ಸಂಘಟಕರದ್ದಾಗಿರುತ್ತದೆ ಎಂದರು. ಉಪನ್ಯಾಸಕಿ ಗೀತಾ ಕೊಂಕೋಡಿ ಡಾ. ನಾ.ಮೊಗಸಾಲೆ ಅವರ ಕುರಿತು ಮಾತನಾಡಿದರು. ಕಸಾಪ ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ ಸನ್ಮಾನಪತ್ರ ವಾಚಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮೋಹನ್ ರಾವ್, ನೀರ್ಪಾಜೆ ಭೀಮ ಭಟ್ಟರ ಪತ್ನಿ ಶಂಕರಿ ಭೀಮ ಭಟ್ ಉಪಸ್ಥಿತರಿದ್ದರು. ನೀರ್ಪಾಜೆ ಭೀಮಭಟ್ಟರ ಅಭಿಮಾನಿ ಬಳಗ ಅಧ್ಯಕ್ಷ ಸುದರ್ಶನ್ ಜೈನ್ ಸ್ವಾಗತಿಸಿದರು. ಸಂಘಟಕ ಕೊಳಕೆ ಗಂಗಾಧರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಅಭಿಮಾನಿ ಬಳಗ ಬೆಳೆದುಬಂದ ದಾರಿ ಕುರಿತು ವಿವರಿಸಿದರು. ಉಪನ್ಯಾಸಕ ವಿ.ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು. ರಾಜಾರಾಮ ವರ್ಮ ವಿಟ್ಲ ವಂದಿಸಿದರು.

ಜಾಹೀರಾತು

www.bantwalnews.com Editor: Harish Mambady

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ