ವಿಟ್ಲ

ಬೆದರಿಕೆ ಆರೋಪ: ಪೆರುವಾಯಿ ನಿವಾಸಿ ವಿಟ್ಲ ಪೊಲೀಸರ ವಶಕ್ಕೆ

ಸಂಘಟನೆಯೊಂದರ ಸದಸ್ಯರು ಹಾಗೂ ರಾಜಕೀಯ ನಾಯಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಅನ್ವರ್ ಮತ್ತು ನಿಯಾಜ್ ಎಂಬವರ ವಿರುದ್ಧ ದೂರು ನೀಡಲಾಗಿದ್ದು, ಈ ಪೈಕಿ ಅನ್ವರ್ ಎಂಬಾತನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಟ್ವಾಳ ಪೆರುವಾಯಿ ಗ್ರಾಮದ ಅನ್ವರ್ ಮತ್ತು ನಿಯಾಜ್ ಎಂಬವರುಗಳು ಎನ್.ಆರ್.ಸಿ ಮತ್ತು ಸಿ.ಎ.ಎ ಕಾಯ್ದೆಗೆ ಸಂಬಂಧಿಸಿದಂತೆ ಮಂಗಳೂರು ವಾಮಂಜೂರಿನ  ಕೆಲವು ವ್ಯಕ್ತಿಗಳಿಗೆ ಹಾಗೂ ವಿದೇಶದಲ್ಲಿ ಉದ್ಯೋಗದಲ್ಲಿರುವ ವಾಮಂಜೂರು ಮೂಲದ ವ್ಯಕ್ತಿಯೋರ್ವರಿಗೆ ಪೋನ್ ಕರೆ ಮಾಡಿ ಒತ್ತಡ ಹೇರಿದ್ದು ಹಾಗೂ ಈ ಸಂಬಂಧ ಆರೋಪಿಗಳು ಕಳುಹಿಸಿರುವ ವಾಟ್ಸಾಪ್ ಸಂದೇಶದಲ್ಲಿ ಸಂಘಟನೆಯೊಂದರ ಸದಸ್ಯರುಗಳನ್ನು ಹಾಗೂ ಕೆಲವು ರಾಜಕೀಯ ನಾಯಕರುಗಳನ್ನು ಕೊಲ್ಲುವ ಬೆದರಿಕೆ ಹಾಕಿದ್ದಾಗಿ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಲಂ: 153(ಎ),504,505(2),507,ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ