ದಲಿತ್ ಸೇವಾ ಸಮಿತಿ ಬೇಡಿಕೆ ಈಡೆರಿಕೆ: ರಾಜೇಶ್ ನಾಯ್ಕ್ ಭರವಸೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ವತಿಯಿಂದ ಸೋಮವಾರ ಬಿ.ಸಿ.ರೋಡ್ ಮಿನಿವಿಧಾನ ಸೌಧದ ಮುಂಭಾಗದಲ್ಲಿ ಧರಣಿ ನಡೆಯಿತು. ಈ ಸಂದರ್ಭ ಸ್ಥಳಕ್ಕಾಗಮಿಸಿದ ಶಾಸಕ ರಾಜೇಶ್ ನಾಯ್ಕ್ ಯು, ದಲಿತರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.

ಜಾಹೀರಾತು

ದಲಿತ್ ಸಮಿತಿಯ ಜಿಲ್ಲಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ಧರಣಿಯ ನೇತೃತ್ವ ವಹಿಸಿ ಮಾತನಾಡಿ, ಬಂಟ್ವಾಳ ತಾಲೂಕಿನ ಪುರಸಭೆ, ಪಟ್ಟಣ ಪಂಚಾಯತ್ ಮತ್ತು ಗ್ರಾಮ ಪಂಚಾಯತ್‌ಗಳಲ್ಲಿ ನಿವೇಶನ ರಹಿತರಿಗೆ ನಿವೇಶನವನ್ನು ಒದಗಿಸಬೇಕು. ಅದಲ್ಲದೆ, ಬಂಟ್ವಾಳ ತಾಲೂಕಿನ ನಿವೃತ್ತ ಸೈನಿಕರಿಗೆ ಅಳತೆಯಾಗಿರುವ ಜಮೀನಿಗೆ ಹಕ್ಕು ಪತ್ರ ನೀಡಬೇಕು. ಅನೇಕ ವರ್ಷಗಳಿಂದ ಸರಕಾರ ಮತ್ತು ಸರಕಾರದ ಸ್ವಾಮ್ಯಕ್ಕೆ ಒಳಪಡುವ ಇಲಾಖೆ ಅಥವಾ ಸಂಸ್ಥೆಗಳಲ್ಲಿ ಹೊರಗುತ್ತಿಗೆ ನೌಕರರಾಗಿ ದುಡಿಯುವ ವರ್ಗವನ್ನು ಖಾಯಂಗೊಳಿಸಬೇಕು. ಇಲ್ಲಿ ಹೆಚ್ಚಿನ ನೌಕರರು ಪ.ಜಾತಿ/ಪ.ಪಂಗಡ ಹಾಗೂ ಬಡವರ್ಗದವರಾಗಿದ್ದು, ಇವರ ಕೆಲಸದ ವಯೋಮಿತಿ ದಾಟಿದೆ. ಆದ್ದರಿಂದ ಈ ನೌಕರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದರೊಂದಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಅಧ್ಯಕ್ಷ ಶ್ರೀಧರ್, ನಲಿಕೆ ಸಮಾಜದ ಸೇವಾ ಸಮಿತಿ ಅಧ್ಯಕ್ಷ ರಮೇಶ್ ಕಡಂಬು, ಬ್ರಹ್ಮಶ್ರೀ ನಾರಾಯಣ ಸ್ವಾಮಿ ಇದರ ಅಧ್ಯಕ್ಷ ಮಾರಪ್ಪ ಸುವರ್ಣ ಕೆದಿಲ, ಮಹಿಳಾ ಜಿಲ್ಲಾಧ್ಯಕ್ಷೆ ಮೀನಾಕ್ಷಿ ನೆಲ್ಲಿಗುಡ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮಣ್ಣ ಪಿಲಿಂಜ, ಚಂದ್ರಶೇಖರ, ಜಿಲ್ಲಾ ಉಪಾಧ್ಯಕ್ಷರಾದ ಪ್ರಸಾದ್ ಬೊಳ್ಮಾರ್, ರಾಜು ಹೊಸ್ಮಠ, ಬಂಟ್ವಾಳ ತಾಲೂಕು ಅಧ್ಯಕ್ಷ ಗಣೇಶ್ ಸೀಗೆಬಲ್ಲೆ, ಮೋಹನ್ ದಾಸ್ ವಿಟ್ಲ, ಗೋಪಾಲ ನೇರಳಕಟ್ಟೆ, ಕುಶಾಲಪ್ಪ, ಸೋಮಪ್ಪ, ಅಣ್ಣಪ್ಪ, ಸುನಂದ ಪುತ್ತೂರು ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದಲಿತ್ ಸೇವಾ ಸಮಿತಿ ಬೇಡಿಕೆ ಈಡೆರಿಕೆ: ರಾಜೇಶ್ ನಾಯ್ಕ್ ಭರವಸೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*