ಬಂಟ್ವಾಳ

ಜ.12ರಂದು ದೈವಾರಾಧಕರ ಚಿಂತನ ಮಂಥನ, ಸನ್ಮಾನ

ದ.ಕ.ಜಿಲ್ಲಾ ಪಾಣರ ಯಾನೆ ನಲಿಕೆಯವರ ಸಮಾಜ ಸೇವಾ ಸಂಘ(ರಿ) ಮೂಡುಬಿದಿರೆ ಹಾಗೂ ದ.ಕ.ಜಿಲ್ಲಾ ದೈವಾರಾಧನಾ ಸಮಿತಿ ಆಶ್ರಯದಲ್ಲಿ ಅವಿಭಜಿತ ದ.ಕ, ಕಾಸರಗೋಡು, ಕೊಡಗು, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಗಳ ದೈವಾರಾಧಕರ ಚಿಂತನ-ಮಂಥನ ಕಾರ್ಯಕ್ರಮ, ಸನ್ಮಾನ, ವಿಚಾರಗೋಷ್ಠಿಗಳು ಜ.12ರಂದು ಬಿ.ಸಿ.ರೋಡಿನ ಬಂಟ್ವಾಳ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.

ಜಾಹೀರಾತು

ಬೆಳಗ್ಗೆ 9.30ರಿಂದ ಮಧ್ಯಾಹ್ನ 2 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭ ಮೂಲ ಸ್ವರೂಪಕ್ಕೆ ಧಕ್ಕೆ ಬಾರದ ರೀತಿಯಲ್ಲಿ ದೈವಾರಾಧನೆ ನಡೆಸುವ ವಿಚಾರದ ಕುರಿತು ಅನುಭವ, ಅನಿಸಿಕೆ, ಚಿಂತನ ಮಂಥನ ನಡೆಯುವುದು ಎಂದು ಗುರುವಾರ ಸಂಜೆ ದೈವಾರಾಧನಾ ಸಮಿತಿ ಅಧ್ಯಕ್ಷ ಜನಾರ್ದನ ಬುಡೋಳಿ ಹೇಳಿದರು.

ಧಾರ್ಮಿಕ ಪರಿಷತ್ತು ಮಾಜಿ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ ಉದ್ಘಾಟಿಸಲಿದ್ದು, ನಾನಾ ಕ್ಷೇತ್ರಗಳ ಗಣ್ಯರು ಅತಿಥಿಗಳಾಗಿರುವರು. ಬಳಿಕ ವಿಚಾರಗೋಷ್ಠಿ ನಡೆಯಲಿದ್ದು, ಸಮಾರೋಪದಲ್ಲಿ ಬಾಳೆಕೋಡಿ ಶ್ರೀ ಶಶಿಕಾಂತ ಮಣಿ ಸ್ವಾಮೀಜಿ ಮತ್ತು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಹಿತ ಗಣ್ಯರು ಭಾಗವಹಿಸುವರು. ಶತಾಯುಷಿ ಕಲಾವಿದ ನಿಟ್ಟೋಣಿ ಬೊಳ್ಳೂರು, ಸಹಿತ ಹಲವು ಗಣ್ಯರ ಸನ್ಮಾನ ನಡೆಯಲಿದೆ ಎಂದರು. ಪಾಡ್ದನ, ಸಂಪ್ರದಾಯ ಪಾಲನೆ, ಬಣ್ಣಗಾರಿಕೆ, ಉಡುಗೆ, ತೊಡುಗೆ, ದೈವಾರಾಧನೆ, ಹಿನ್ನೆಲೆ ಸಂಗೀತ ಕುರಿತು ವಿಚಾರ ಮಂಡನೆ, ಅನುಭವ, ಅನಿಸಿಕೆ, ಉಚಿತಾನುಚಿತತೆ, ಸವಾಲುಗಳು, ಸಮಯ ಪಾಲನೆ, ದೈವದ ಅಣಕು ಪ್ರದರ್ಶನ ಕುರಿತ ವಿಚಾರಗಳೂ ಚಿಂತನ ಮಂಥನದಲ್ಲಿ ಇರಲಿವೆ ಎಂದರು.

ಜಾಹೀರಾತು

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗೌರವಾಧ್ಯಕ್ಷ ಎಂ.ಡಿ.ವೆಂಕಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೊ. ಎಂ.ಡಿ.ಮಂಚಿ, ಪದಾಧಿಕಾರಿಗಳಾದ ಪದ್ಮನಾಭ ಮೂಡುಬಿದಿರೆ, ಎಲ್.ಕೆ.ಧರಣಿ ಮಾಣಿ, ರಾಮಣ್ಣ ಪಿಲಿಂಜ ಉಪಸ್ಥಿತರಿದ್ದರು.

www.bantwalnews.com Editor: Harish Mambady

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ