ಬಂಟ್ವಾಳ

ಹಡೀಲು ಬಿದ್ದ ಗದ್ದೆ ನಾಟಿ ಮಾಡಿದ ಗ್ರಾಮಾಭಿವೃದ್ಧಿ ಯೋಜನೆ ಸದಸ್ಯರು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಬಂಟ್ವಾಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಕೃಷಿ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಬಂಟ್ವಾಳ ಮಯ್ಯರಬೈಲಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಿಸಾನ್ ಗೋಷ್ಠಿ ಮತ್ತು ಹಡೀಲು ಬಿದ್ದ ಗದ್ದೆ ನಾಟಿ ಮಾಡುವ ಕಾರ್ಯ ನಡೆಯಿತು.

ಜಾಹೀರಾತು

ಆಚಾರಿಪಲ್ಕೆ ಒಕ್ಕೂಟದ ಕೇಳ್ದೋಡಿ ಪ್ರಗತಿಬಂಧು ಸಂಘದ ಸದಸ್ಯರು ಕಳೆದ ವರ್ಷವೂ ಇದೇ ಹಡೀಲು ಬಿದ್ದ ಗದ್ದೆಯಲ್ಲಿ ನಾಟಿ ಕಾರ್ಯ ನಡೆಸಿದ್ದರು. ಈ ಬಾರಿಯೂ ರಾಜೇಶ್, ಪದ್ಮನಾಭ ನೇತೃತ್ವದಲ್ಲಿ ಸದಸ್ಯರು ಶುಕ್ರವಾರ ನಾಟಿ ಕಾರ್ಯ ನಡೆಸಿದರು.

ಕಿಸಾನ್ ಗೋಷ್ಠಿ ಮತ್ತು ನಾಟಿ ಮಾಡುವ ಕಾರ್ಯಕ್ರಮವನ್ನು ಶ್ರೀ  ಕ್ಷೇತ್ರ  ಧರ್ಮಸ್ಥಳ  ಗ್ರಾಮಾಭಿವೃದಿ ಯೋಜನೆಯ ಉಡುಪಿ  ಪ್ರಾದೇಶಿಕ ನಿರ್ದೇಶಕ  ವಸಂತ ಸಾಲಿಯಾನ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಬಿಸಿರೋಡ್ ವಲಯ ಅಧ್ಯಕ್ಷ ಶೇಖರ ಸಾಮಾನಿ ವಹಿಸಿದ್ದರು. ಕೃಷಿ ಇಲಾಖೆ ಅಧಿಕಾರಿ ನಾರಾಯಣ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಜಯಾನಂದ ಪಿ, ಸಿಎಚ್.ಸಿ. ಕೇಂದ್ರ ಯೋಜನಾಧಿಕಾರಿ ಅಶೋಕ್, ಯೋಜನೆಯ ಕೃಷಿ ಅಧಿಕಾರಿ ಜನಾರ್ದನ, ಬಿ.ಸಿ.ರೋಡ್ ವಲಯ ಮೇಲ್ವಿಚಾರಕ ಕೇಶವ್ ಕೆ, ಸೇವಾಪ್ರತಿನಿಧಿಗಳು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು

ಕೃಷಿ ಮೇಲ್ವಿಚಾರಕರಾದ ಜನಾರ್ದನ ಕಾರ್ಯಕ್ರಮ ನಿರೂಪಿಸಿದರು ಸೇವಾ ಪ್ರತಿ ನಿಧಿ ವನಜಾಕ್ಷಿ ಪ್ರಾರ್ಥನೆ ಮಾಡಿ  ಕೃಷಿ  ಅಧಿಕಾರಿ ಸಂತೋಷ್ ಸ್ವಾಗತಿಸಿ  ವಲಯದ ಮೇಲ್ವಿಚಾರಕರಾದ  ಕೇಶವ ಕೆ. ವಂದಿಸಿದರು  ಇದೇ ವೇಳೆ ಭತ್ತದ ಬೆಳೆ ಮತ್ತು ಇಲಾಖೆಯಿಂದ ದೊರಕುವ ಸವಲತ್ತುಗಳ ಕುರಿತು ಕೃಷಿ ಇಲಾಖೆ ಅಧಿಕಾರಿ ನಾರಾಯಣ್ ಮಾಹಿತಿ ನೀಡಿದರು. ಮೌನೇಶ ವಿಶ್ವಕರ್ಮ ನೇತೃತ್ವದಲ್ಲಿ ಕಿರುಪ್ರಹಸನ ಈ ಸಂದರ್ಭ ನಡೆಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ