ಬಂಟ್ವಾಳ

ನಂದಾವರ ಜ್ಞಾನಮಂದಿರ ಲೋಕಾರ್ಪಣೆ ಆಮಂತ್ರಣ ಪತ್ರಿಕೆ ಬಿಡುಗಡೆ

www.bantwalnews.com Editor: Harish Mambady

ಜಾಹೀರಾತು

ಸುಮಾರು ಒಂದು ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನಂದಾವರ ಶ್ರೀ  ವಿನಾಯಕ ಶಂಕರನಾರಾಯಣ ದುರ್ಗಾಂಬಾ ಸನ್ನಿಧಿಯ ಜ್ಞಾನಮಂದಿರ ಸಮುದಾಯಭವನ ಫೆಬ್ರವರಿ 9ರಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಲೋಕಾರ್ಪಣೆಗೊಳ್ಳಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕ್ಷೇತ್ರದಲ್ಲಿ ಮಂಗಳವಾರ ಬೆಳಗ್ಗೆ ನಡೆಯಿತು.

ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ, ನೇತ್ರಾವತಿ ತಟದಲ್ಲಿರುವ ನಂದಾವರ ಕ್ಷೇತ್ರ ಜಾತಿ, ಮತ ಬೇಧವಿಲ್ಲದೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ಮುನ್ನಡೆಯುತ್ತಿದ್ದು, ಜ್ಞಾನಮಂದಿರ ಸಮುದಾಯ ಭವನ ಮತ್ತಷ್ಟು ಸತ್ಕಾರ್ಯಗಳಿಗೆ ಪ್ರೇರಣೆಯಾಗಲಿ ಎಂದು ಹಾರೈಸಿದರು.

ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ ಕ್ಷೇತ್ರದ ಇತಿಹಾಸ ಹಾಗೂ ಜ್ಞಾನಮಂದಿರ ಸಮುದಾಯ ಭವನ ಮತ್ತು ಕ್ಷೇತ್ರದಲ್ಲಿ ಕಳೆದ ನಾಲ್ಕು ದಶಕಗಳಲ್ಲಿ ಆದ ಪ್ರಗತಿ ಕಾರ್ಯಗಳ ವಿವರ ನೀಡಿದರು.

ಜಾಹೀರಾತು

2007ರಲ್ಲಿ ಅಂದಿನ ಮುಖ್ಯಮಂತ್ರಿ ಧರ್ಮಸಿಂಗ್ ಶಿಲಾನ್ಯಾಸ ನೆರವೇರಿಸಿದ್ದ ಜ್ಞಾನಮಂದಿರದ ತಳ ಅಂತಸ್ತಿನಲ್ಲಿ ಸುಮಾರು 1 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾದ ನೇತ್ರಧಾರಾ ಹಾಗೂ ಅಕ್ಷಯ ಎಂಬ ಸಭಾಂಗಣಗಳು ಕಳೆದ ವರ್ಷ ಲೋಕಾರ್ಪಣೆಗೊಂಡಿದ್ದು, ವಾರ್ಷಿಕ ಜಾತ್ರಾ ಮಹೋತ್ಸವದ ಆರಂಭದ ದಿನವಾದ ಫೆ.9ರಂದು ಜ್ಞಾನಮಂದಿರ ಲೋಕಾರ್ಪಣೆ ಸಂದರ್ಭ ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಸಾನಿಧ್ಯ ವಹಿಸುವರು. ಶಾಸಕ ರಾಜೇಶ್ ನಾಯ್ಕ್, ವಿಧಾನಪರಿಷತ್ತು ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ ಸಹಿತ ಪ್ರಮುಖರು ಪಾಲ್ಗೊಳ್ಳುವರು ಎಂದರು. ಈ ಸಂದರ್ಭ ಕ್ಷೇತ್ರದ ಪ್ರಧಾನ ಅರ್ಚಕ ವೇದಮೂರ್ತಿ ಮಹೇಶ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೆ.ಪ್ರಭಾಕರ ಶೆಟ್ಟಿ, ಡಾ. ಎಸ್.ಎಂ.ಗೋಪಾಲಕೃಷ್ಣ ಆಚಾರ್ಯ, ಎಸ್.ಗಂಗಾಧರ ಭಟ್ ಕೊಳಕೆ, ಮೋಹನದಾಸ ಪೂಜಾರಿ ಬೊಳ್ಳಾಯಿ, ಅಣ್ಣು ನಾಯ್ಕ್ ನಗ್ರಿ, ರಮಾ ಎಸ್ ಭಂಡಾರಿ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ