ಕೃಷಿ ಇಲಾಖೆಯ ಸೌಲಭ್ಯಗಳ ವಿತರಣೆ

ಬಂಟ್ವಾಳ ಕೃಷಿ ಇಲಾಖೆಯಿಂದ ವಿವಿಧ ಯೋಜನೆಗಳಿಂದ ಮಂಜೂರಾದ ಸೌಲಭ್ಯಗಳನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶುಕ್ರವಾರ ಬಿ.ಸಿ.ರೋಡಿನಲ್ಲಿರುವ ಕೃಷಿ ಇಲಾಖೆಯ ಆವರಣದಲ್ಲಿ ಫಲಾನುಭವಿಗಳಿಗೆ ವಿತರಿಸಿದರು.

ಜಾಹೀರಾತು

2019-20ನೇ ಸಾಲಿನ ಕೃಷಿ ಯಾಂತ್ರೀಕರಣ ಯೋಜನೆಯಲ್ಲಿ ವೀರಕಂಭ ಗ್ರಾಮದ ಮೈರ ಮನೆ ಶೀನ ಪೂಜಾರಿ ಅವರಿಗೆ 1.52 ಲಕ್ಷ ರೂ.ಮೊತ್ತದ(60 ಸಾವಿರ ರೂ.ಸಹಾಯಧನ) ಪವರ್ ಟಿಲ್ಲರ್ ಹಸ್ತಾಂತರಿಸಿದರು. ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಕಾರ್ಯಕ್ರಮದಡಿ 5 ಮಂದಿ ಪವರ್ ವೀಡರ್ ವಿತರಿಸಲಾಯಿತು.

ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದ ಜಿಲ್ಲಾ ಮಟ್ಟದಲ್ಲಿ ಗಣಪತಿ ಭಟ್ ಎನ್.ಕೆ. ಸಜೀಪಮೂಡ ಹಾಗೂ ರಾಮಕೃಷ್ಣ ಅಡ್ಯಂತಾಯ ಮಾಣಿಲ ಅವರಿಗೆ ತಲಾ 25 ಸಾವಿರ ರೂ.ಗಳ ಚೆಕ್ ವಿತರಿಸಲಾಯಿತು. ತಾಲೂಕು ಮಟ್ಟದಲ್ಲಿ ಮಮತಾ ಶಂಭೂರು, ಜಯರಾಮ ರಾವ್ ಇರಾ, ಜಯಪ್ರಕಾಶ್ ಮಾಣಿಲ, ಹರಿಪ್ರಸಾದ್ ಪ್ರಭು ಕರ್ಪೆ, ಪ್ಯಾಟ್ರಿಕ್ ಫ್ರಾನ್ಸಿಸ್ ಪಿಂಟೋ ಅವರಿಗೆ ತಲಾ 10 ಸಾವಿರ ರೂ.ಗಳ ಚೆಕ್ ವಿತರಿಸಲಾಯಿತು. ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆಯಡಿ ಶೇಕಡಾ 90ರ ಸಹಾಯಧನದಲ್ಲಿ ತುಂತುರು ನೀರಾವರಿ ಘಟಕ ಯೋಜನೆಯಡಿ 30 ಫಲಾನುಭವಿಗಳಿಗೆ ಸ್ಪಿಂಕ್ಲೇರ್ ವಿತರಿಸಲಾಯಿತು.

ದ.ಕ.ಜಿ.ಪಂ.ಸದಸ್ಯ ರವೀಂದ್ರ ಕಂಬಳಿ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ಉಪಸ್ಥಿತರಿದ್ದರು. ಸಹಾಯಕ ಕೃಷಿ ನಿರ್ದೇಶಕ ನಾರಾಯಣ ಶೆಟ್ಟಿ ಅವರು ಫಲಾನುಭವಿಗಳ ವಿವರ ನೀಡಿದರು. ಸಹಾಯಕ ಕೃಷಿ ಅಧಿಕಾರಿಗಳಾದ ಕೊರಗಪ್ಪ, ಎಸ್.ಕೆ.ಸರಿಕರ ಹಾಗೂ ಇಲಾಖೆ ಸಿಬಂದಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೃಷಿ ಇಲಾಖೆಯ ಸೌಲಭ್ಯಗಳ ವಿತರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*