ದೇವಾಡಿಗ ಸಮಾಜದಿಂದ ಮಾ.11ರಂದು ಪೊಳಲಿ ಷಷ್ಠಿರಥ ಸಮರ್ಪಣೆ

ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಕಳೆದ ವರ್ಷ ನಡೆದ ಬ್ರಹ್ಮಕಲಶೋತ್ಸವವು ಮಾದರಿ ಕಾರ್ಯಕ್ರಮವಾಗಿದ್ದು, ಹಲವು ಶತಮಾನಗಳಿಂದ ದೇವಾಡಿಗ ಸಮಾಜದವರು ಶ್ರೀ ಕ್ಷೇತ್ರದಲ್ಲಿರುವ ಬ್ರಹ್ಮರಥ, ಷಷ್ಠಿರಥದ ಕೆಲಸವನ್ನೇ ಮಾಡುತ್ತಿದ್ದು, ದೇವಾಡಿಗ ಸಮಾಜ ಬಾಂಧವರಿಂದ ಪೊಳಲಿ ಆಡಳಿತ ಮಂಡಳಿಯ ಅನುಮತಿಯ ಮೇರೆ ನೂತನ ಷಷ್ಠಿ ರಥವನ್ನು ಮಾರ್ಚ್ ೧೧ರಂದು ಸಮರ್ಪಿಸಲಾಗುವುದು ಎಂದು ದೇವಾಡಿಗ ಸಮಾಜದ ಶ್ರೀ ಪೊಳಲಿ ಷಷ್ಠಿರಥ ಸಮರ್ಪಣಾ ಸಮಿತಿಯ ಅಧ್ಯಕ್ಷ ರಾಮದಾಸ ಬಂಟ್ವಾಳ್ ತಿಳಿಸಿದರು.


ಗುರುವಾರ ಬೆಳಿಗ್ಗೆ ಪೊಳಲಿ ಕ್ಷೇತ್ರದಲ್ಲಿ ನಡೆದ ಆಮಂತ್ರಣ ಪತ್ರಿಕೆ ಬಿಡುಗಡೆ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿ ಷಷ್ಠಿರಥ ಸಮರ್ಪಣೆಗೆ ಎಲ್ಲಾ ದೇವಾಡಿಗ ಸಮಾಜ ಬಾಂಧವರ ಕೊಡುಗೆ ಇದೆ. ಇತರ ಸಮಾಜದವರ ಸಹಕಾರವೂ ಇದೆ ಎಂದರು. ಮಾರ್ಚ್ 8ರಂದು ಪೊಳಲಿ ದೇವಿಯ ಮಹಾದ್ವಾರದಿಂದ ವಿವಿಧ ಭಾಗಗಳಿಂದ ಆಗಮಿಸಿದ ಹೊರೆಕಾಣಿಕೆ ವಾಹನಗಳು ಸೇರಿಕೊಂಡು ಪೊಳಲಿ ದೇವಸ್ಥಾನದವರೆಗೆ ಶೋಭಾಯಾತ್ರೆಯ ಮೂಲಕ ಹೊರೆಕಾಣಿಕೆ ಸಮರ್ಪಣೆ ನಡೆಯಲಿದೆ. ಸಮಾಜದ ಪರವಾಗಿ ಪ್ರಥಮವಾಗಿ ಪೊಳಲಿ ಶ್ರೀ ರಾಜರಾಜೇಶ್ವರಿಗೆ ದೊಡ್ಡರಂಗಾಪೂಜಾ ಉತ್ಸವ ಹಾಗೂ ಷಷ್ಠಿ ಸಮರ್ಪಣಾ ಕಾರ್ಯಕ್ರಮ, ಸಭಾಕಾರ್ಯಕ್ರಮದಲ್ಲಿ ಸಹಕರಿಸಿದ ಎಲ್ಲಾ ಮಹಾನೀಯರಿಗೆ ಅಭಿನಂದನಾ ಸಮಾರಂಭ ಹಾಗೂ ಸಮಾಜ ಬಾಂಧವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಸುಮಾರು ಹತ್ತು ಸಾವಿರ ದೇವಾಡಿಗ ಬಾಂಧವರ ಸಮ್ಮಿಲನ ಕಾರ್ಯಕ್ರಮವಾಗಲಿದೆ ಎಂದು ತಿಳಿಸಿದರು. ಇದೇ ವೇಳೆ ಕಾರ್ಯಾಲಯ ಉದ್ಘಾಟನೆ ನಡೆಯಿತು.

ಜಾಹೀರಾತು

ಷಷ್ಠಿರಥ ಸಮರ್ಪಣಾ ಸಮಿತಿಯ ಗೌರವಾಧ್ಯಕ್ಷ ಗೋಪಾಲ ಎಂ. ಮೊಯ್ಲಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬಿ. ತುಂಬೆ, ಕೋಶಾಧಿಕಾರಿ ನಾಗೇಶ್ ದೇವಾಡಿಗ ಪೊಳಲಿ, ಉಪಾಧ್ಯಕ್ಷರುಗಳಾದ ಭಾಸ್ಕರ ಎಂ. ಕದ್ರಿ, ಕರಿಯಂಗಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂದ್ರಾವತಿ, ಕೃಷ್ಣಪ್ಪ ದೇವಾಡಿಗ, ರಮಾನಾಥ ದೇವಾಡಿಗ, ರೋಹಿತಾಶ್ವ ಮರೋಳಿ, ಸದಾಶಿವ ಬೆಂಜನಪದವು, ಪ್ರಶಾಂತ್ ಪೊಳಲಿ ಮತ್ತು ನಾನಾ ಸಮಿತಿಗಳ ಸಂಚಾಲಕರು, ಮುಖಂಡರು ಇದ್ದರು.,

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದೇವಾಡಿಗ ಸಮಾಜದಿಂದ ಮಾ.11ರಂದು ಪೊಳಲಿ ಷಷ್ಠಿರಥ ಸಮರ್ಪಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*